ನರೇಗಾ ದಿವಸದ ಅಂಗವಾಗಿ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮ ಪಂಚಾಯಿತಿಯಲ್ಲಿ ರೋಜ್ಗಾರ್ ದಿನಾಚರಣೆ ನಡೆಯಿತು.
ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಪಂ ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬಿ. ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಅರ್ಜಿ ಸಲ್ಲಿಸಿ ಗ್ರಾಮದ ಅರ್ಹ ಫಲಾನುಭವಿಗಳು ಕಾಮಗಾರಿ ಕೈಗೊಳ್ಳಬೇಕು. ವರ್ಷದಲ್ಲಿ 100 ದಿನಗಳನ್ನು ಪೂರೈಸುವವರ ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು. ಗ್ರಾಮ ಪಂಚಾಯತ್ ಕಾರ್ಯಕ್ರಮ, ಸಭೆಗಳಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಾದಂತೆ ಸರ್ಕಾರದ ಯೋಜನೆ ಮಾಹಿತಿಯನ್ನು ಪಡೆಯಲು ಸಹಕಾರಿಯಾಗಲಿದೆ ಎಂದು ಹೇಳಿದರು.
ನರೇಗಾ ತಾಲೂಕು ಐಇಸಿ ಸಂಯೋಜಕ ರಾಜೇಶ್ ಮಾತನಾಡಿ, ನರೇಗಾ ಯೋಜನೆಯ ಆರಂಭ ಹಾಗೂ ಗ್ರಾಮಸ್ಥರು ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ತಿಳಿಸಿದರು. ಅಮೃತ ಆರೋಗ್ಯ ತಾಲೂಕು ಸಂಯೋಜಕರಾದ ಅಲ್ಲಾಭಕ್ಷ್, ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವುದು, ಅದರಿಂದ ಸಿಗುವ ಸವಲತ್ತುಗಳ ಮಾಹಿತಿ ನೀಡಿದರು. ಇದೇ ವೇಳೆ 2023-24ನೇ ಸಾಲಿನಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಂಡು 100 ಮಾನವದಿನಗಳನ್ನು ಪೂರೈಸಿದ ಫಲಾನುಭವಿ ಮಾಲತಿ ಅವರಿಗೆ ಸಸಿ ವಿತರಿಸಲಾಯಿತು. ” ಹಸಿರೇ ಉಸಿರು” ಧ್ಯೇಯದಡಿ ಗ್ರಾಮ ಆವರಣದಲ್ಲಿ ಗಿಡ ನೆಡಲಾಯಿತು. ಗ್ರಾಪಂ ಉಪಾಧ್ಯಕ್ಷೆ ಸಂಧ್ಯಾ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಶಶಿಕಲಾ, ಪುರಂದರಗೌಡ ಹಾಗೂ ಗ್ರಾಪಂ ಸಿಬ್ಬಂದಿ ಕುಶಾಲ್, ಲಿಂಗಪ್ಪ ಟಿ., ಹರಿಣಾಕ್ಷಿ, ಸೇವಂತಿಕ ರೈ, ಮಮತಾ, ಸಂಜೀವಿನಿ ಒಕ್ಕೂಟದ ಎಂಬಿಕೆ ಪ್ರೇಮಲತಾ ಹಾಗೂ ಗ್ರಾಮಸ್ಥರು, ಭಾಗವಹಿಸಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…