ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ ವಿಶಾಲ ಗಾಣಿಗ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ನಾಲ್ಕನೇ ಆರೋಪಿಯ ಬಂಧನ


ಉಡುಪಿ: ಮೂರು ವರ್ಷಗಳ ಹಿಂದೆ ಬ್ರಹ್ಮಾವರ ಕುಮ್ರಗೋಡುವಿನ ಮಿಲನ ರೆಸಿಡೆನ್ಸಿಯಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಗೋರಕ್ ಪುರದ ಧರ್ಮೇಂದ್ರ ಕುಮಾರ್ ಸುಹಾನಿ ಎಂದು ಗುರುತಿಸಲಾಗಿದೆ. ಈತ 3 ವರ್ಷಗಳಿಂದ ದುಬೈನಲ್ಲಿ ತಲೆಮರೆಸಿಕೊಂಡಿದ್ದನು. ಶುಕ್ರವಾರ ತನ್ನ ಊರಿಗೆ ಬರುತ್ತಿದ್ದಂತೆ ಲಕ್ನೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಈತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಆರೋಪಿ ಧರ್ಮೇಂದ್ರ ಕುಮಾರ್ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ ನನ್ನು ಮೃತ ವಿಶಾಲ ಅವರ ಗಂಡ ರಾಮಕೃಷ್ಣನಿಗೆ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ್ದನು. ಆರೋಪಿಯನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣದ ಪ್ರಮುಖ ಆರೋಪಿ ಮೃತ ವಿಶಾಲ ಗಾಣಿಗ ಅವರ ಗಂಡ ರಾಮಕೃಷ್ಣ ಹಾಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ‌.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!