ಕುಂದಾಪುರ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಸಂಸ್ಥೆ ಯುವ ಬಂಟರ ಸಂಘ (ರಿ.) ಕುಂದಾಪುರ ಇದರ ದಶಮ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಆಯೋಜನೆಗೊಂಡ, ಸಮಗ್ರ ಕರ್ನಾಟಕ ಬಂಟರ ಸಮಾಗಮ “ಭಾವೈಕ್ಯ” ವಿನೂತನ ಕಾರ್ಯಕ್ರಮ 11 ಫೆಬ್ರವರಿ ಭಾನುವಾರ ಬೆಳಿಗ್ಗೆ 9.00 ಗಂಟೆಗೆ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಕ್ರೀಡಾಂಗಣ, ಯುವ ಮೆರಿಡಿಯನ್ ಸಂಕೀರ್ಣ ಕೋಟೇಶ್ವರದಲ್ಲಿ ನಡೆಯಲಿದೆ.
ಯುವ ಬಂಟರ ಸಂಘ (ರಿ.) ಕುಂದಾಪುರ ಇದರ ಅಧ್ಯಕ್ಷರಾದ ಡಾ! ನಿತ್ಯಾನಂದ ಅಂಪಾರು ಇವರ ಸಾರಥ್ಯದಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ ‘ವಿದ್ಯಾದೀವಿಗೆ’ ಯೋಜನೆಯಡಿ ಬಂಟ ಸಮುದಾಯದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ‘ನವಚೇತನ’ ಯೋಜನೆಯಡಿ ವಿಶೇಷ ಚೇತನರಿಗೆ ಪ್ರೋತ್ಸಾಹಧನ, ಬಂಟರ ಸಾಂಸ್ಕೃತಿಕ ಸಂಭ್ರಮ, ರಾಷ್ಟ್ರಮಟ್ಟದ ಬಂಟರ ಸಮೂಹ ನೃತ್ಯ ಸ್ವರ್ಧೆ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಬಂಟ ಯುವ ಸಾಧಕರಿಗೆ ಸನ್ಮಾನ, ಆಯುರ್ವೇದ ಚಿಕಿತ್ಸೆ ಹಾಗೂ ಕಣ್ಣಿನ ತಪಾಸಣಾ ಶಿಬಿರ ಉಚಿತ ವಿಶೇಷ ಅರೋಗ್ಯ ತಪಾಸಣೆ, , ನಾಡಿನ ಜನಪ್ರಿಯ ಗಾಯಕ ಗಾಯಕಿಯರಾದ ರಾಜೇಶ್ ಕೃಷ್ಣನ್, ಎಂ. ಡಿ. ಪಲ್ಲವಿ, ಮಾನಸ ಹೊಳ್ಳ ಅವರಿಂದ ಸಂಗೀತ ಸಂಜೆ ನಡೆಯಲಿದೆ.
ಬೆಳಿಗ್ಗೆ 9.30 ಕ್ಕೆ ಬಂಟರ ಸಾಂಸ್ಕೃತಿಕ ಸಂಭ್ರಮ, ರಾಷ್ಟ್ರಮಟ್ಟದ ಬಂಟರ ಸಮೂಹ ನೃತ್ಯ ಸ್ವರ್ಧೆಯನ್ನು ಬೆಂಗಳೂರು ಸೌತ್ ಫೀಲ್ಡ್ ಪೈಂಟ್ಸ್ ಆಡಳಿತ ನಿರ್ದೇಶಕ ಎಸ್. ಎಸ್. ಹೆಗ್ಡೆ ಉದ್ಘಾಟಿಸಲಿದ್ದಾರೆ. ಪೂರ್ವಾಹ್ನ 11 ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಎಂ.ಆರ್.ಜಿ ಸಮೂಹ ಉದ್ಯಮ ಸಂಸ್ಥೆಗಳು ಬೆಂಗಳೂರು ಇದರ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 9.30 ಕ್ಕೆ ಬಂಟರ ಸಾಂಸ್ಕೃತಿಕ ಸಂಭ್ರಮ, ರಾಷ್ಟ್ರಮಟ್ಟದ ಬಂಟರ ಸಮೂಹ ನೃತ್ಯ ಸ್ವರ್ಧೆಯನ್ನು ಬೆಂಗಳೂರು ಸೌತ್ ಫೀಲ್ಡ್ ಪೈಂಟ್ಸ್ ಆಡಳಿತ ನಿರ್ದೇಶಕ ಎಸ್. ಎಸ್. ಹೆಗ್ಡೆ ಉದ್ಘಾಟಿಸಲಿದ್ದಾರೆ. ಪೂರ್ವಾಹ್ನ 11 ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಎಂ.ಆರ್.ಜಿ ಸಮೂಹ ಉದ್ಯಮ ಸಂಸ್ಥೆಗಳು ಬೆಂಗಳೂರು ಇದರ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ.
ಹೇರಂಭ ಇಂಡಸ್ಟ್ರೀಸ್ ಮುಂಬೈ ಇದರ ಸಿಎಂಡಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಸಮುದಾಯದ ಹಿರಿಯ ಮುಖಂಡರಾದ ಬಿ. ಅಪ್ಪಣ್ಣ ಹೆಗ್ಡೆ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮೈಸೂರು ಮರ್ಕಂಟೈಲ್ ಕಂ ಪ್ರೈ.ಲಿ ಬೆಂಗಳೂರು ಇದರ ಆಡಳಿತ ನಿರ್ದೇಶಕರಾದ ಡಾ. ಎಚ್.ಎಸ್ ಶೆಟ್ಟಿ ಅವರನ್ನು ಅಭಿನಂದಿಸಲಿದ್ದಾರೆ. ಫಾರ್ಚ್ಯುನ್ ಗ್ರೂಪ್ ಆಫ್ ಹೊಟೇಲ್ಸ್ ದುಬಾಯಿ ಸಿಎಂಡಿ ವಕ್ವಾಡಿ ಪ್ರವೀಣ ಕುಮಾರ್ ಶೆಟ್ಟಿ ದಶರಥ ಸಂಚಿಕೆ ಲೋಕಾರ್ಪಣೆ ಮಾಡಲಿದ್ದಾರೆ. ಸೌತ್ ಫೀಲ್ಡ್ ಪೈಂಟ್ಸ್ ಬೆಂಗಳೂರು ಆಡಳಿತ ನಿರ್ದೇಶಕರಾದ ಎಸ್.ಎಸ್. ಹೆಗ್ಡೆ ವಿದ್ಯಾ ದೀವಿಗೆಗೆ ಚಾಲನೆ ನೀಡಲಿದ್ದಾರೆ. ಮೆರಿಟ್ ಹಾಸ್ಪಿಟಾಲಿಟಿ ಮುಂಬಯಿ ಸಿಎಂಡಿ ಬೆಳ್ಳಾಡಿ ಅಶೋಕ್ ಶೆಟ್ಟಿ ನವಚೇತನಕ್ಕೆ ಚಾಲನೆ ನೀಡಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಸಂಸ್ಥೆಯ ಡಾ. ಎಂ .ಮೋಹನ್ ಆಳ್ವ ಹಾಗು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಶುಭಾಶಂಸನೆಗೈಯಲಿದ್ದಾರೆ.
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು…
ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಬಿಜಿಎಸ್…
ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ…
ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್…