ಕರ್ನಾಟಕ ರಾಜ್ಯ ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರು ನಲ್ಲಿ ನಡೆದ ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಘಟಕದ ಕೇಶವ ಎಸ್ ರವರು ಚಿನ್ನದ ಪದಕವನ್ನು ಪಡೆದೆಕೊಂಡಿರುತ್ತಾರೆ .
ಇವರು ಪುತ್ತೂರು ನಗರ ,ಸಂಚಾರ, ಪುತ್ತೂರು ಗ್ರಾಮಾಂತರ, ಕಡಬ, ಉಪ್ಪಿನಂಗಡಿ,ಠಾಣೆಗಳಲ್ಲಿ ಸೇವೆಯನ್ನು ಸಲ್ಲಿಸಿ ಪ್ರಸ್ತುತ ಪುತ್ತೂರು ಸಂಚಾರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಇವರ ಸೇವೆಯನ್ನು ಗುರುತಿಸಿ ಪೊಲೀಸು ಉಪ ಮಹಾ ನಿರ್ದೇಶಕರಾದ ರವಿ ಡಿ ಚೆನ್ನಣ್ಣನವರ್ ಸ್ವಾಗತಿಸಿದರು. ಪುತ್ತೂರು ಘಟಕದ ಗೃಹರಕ್ಷಕ ಸಿಬ್ಬಂದಿಯಾದ ಇವರು 2016ನೇ ಇಸವಿಯಲ್ಲಿ ಇಲಾಖೆಗೆ ಸೇರಿ ಸುಮಾರು ಎಂಟು ವರ್ಷಗಳ ಕಾಲ ನಿಷ್ಠಾವಂತ ಸೇವೆಯನ್ನು ಸಲ್ಲಿಸಿರುತ್ತಾರೆ. ಗ್ರಾ.ಪಂ ತಾ. ಪಂ ಜಿ.ಪಂ ವಿಧಾನಸಭೆ ಲೋಕಸಬಾ ಚುನಾವಣೆ ತಮಿಳುನಾಡು ಕೇರಳ ರಾಜ್ಯಗಳ ಚುನಾವಣಾ ಕರ್ತವ್ಯ ನಿರ್ವಹಿಸಿರುವ ಇವರು ಸುದ್ದಿ ಆನ್ಲೈನ್ ವೋಟಿಂಗ್ ಮೂಲಕ ಜನರೇ ಗುರುತಿಸುವ ಸುದ್ದಿ ಅಭಿಯಾನದಲ್ಲಿ ಪ್ರಥಮ ಸ್ಥಾನ ಪಡೆದು ಜನರ ಪ್ರೀತಿಗೂ ಪಾತ್ರರಾಗಿದ್ದಾರೆ. ಮೂಲತಃ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಜನಿಸಿ ಪ್ರಸ್ತುತ ನರಿಮೊಗರು ಕಾಳಿಂಗ ಹೀತ್ಲು ನಿವಾಸಿಯಾಗಿರುವ ಕೇಶವ. ಎಸ್ ರವರು ತಂದೆ ಶಿವಜ್ಞಾನ, ತಾಯಿ ಚಿತ್ರಕಲಾ, ಅಣ್ಣ ಸತೀಶ ರವರ ಜೊತೆ ವಾಸ್ತವ್ಯವನ್ನು ಹೊಂದಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…