ಬಂಟ್ವಾಳ : ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ಇದರ 2024-25ರ ನೂತನ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಜಬ್ಬಾರ್ ಮಾರಿಪಳ್ಳ ರವರು ಪುನರಾಯ್ಕೆಯಾಗಿದ್ದಾರೆ.
ಬಿ.ಸಿ ರೋಡ್ ತಲಪಾಡಿ ಡೈಮಂಡ್ ಕ್ಯಾಂಪಸ್ ನಲ್ಲಿ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ಇದರ ಸಲಹೆಗಾರ ಹನೀಫ್ ಖಾನ್ ಕೋಡಾಜೆ ರವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನಂತರ ಮಾತಾಡಿದವರು ಕಳೆದ 11 ವರ್ಷಗಳಿಂದ ಸಂಸ್ಥೆಯು ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಆರೋಗ್ಯ, ಶಿಕ್ಷಣ, ಮೂಲಸೌಕರ್ಯಗಳನ್ನು ಒದಗಿಸುತ್ತಾ ಬಂದಿದೆ. ಅಲ್ಲದೇ ಹಿಜಾಮ, ಬೃಹತ್ ರಕ್ತದಾನ ಶಿಬಿರ, ಡ್ರಗ್ಸ್ ಮುಕ್ತ ಜನ ಜಾಗೃತಿ ಅಭಿಯಾನದಂತಹ ಕಾರ್ಯಕ್ರಮಗಳಲ್ಲಿ ಯಶಸ್ವಿಯನ್ನು ಕಂಡಿರುವುದು ಶ್ಲಾಘನ್ಯವಾಗಿದೆ ಎಂದುರು.
ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಸದಸ್ಯರಾದ ರಝಾಕ್ ಬಲ್ಲಾಳ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಪದಾಧಿಕಾರಿಗಳ ವಿವರ ಇಂತಿವೆ.
ಸಲಹಾ ಸಮಿತಿ ಮುಖ್ಯಸ್ಥರಾಗಿ ಹನೀಫ್ ಖಾನ್ ಕೋಡಾಜೆ, ಅಬ್ದುಲ್ ಖಾದರ್ ಅರಫಾ, ಶಬೀರ್ ಕೆಂಪಿ, ಗೌರವಾಧ್ಯಕ್ಷರಾಗಿ ಎಸ್.ಎಂ ಬಾಷ, ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಅರಫಾ, ರಝಾಕ್ ಬಲ್ಲಾಳ್, ಪ್ರಧಾನ ಕಾರ್ಯದರ್ಶಿಯಾಗಿ ಡೈಮಂಡ್ ಅಲ್ತಾಫ್ ಫರಂಗಿಪೇಟೆ, ಜೊತೆ ಕಾರ್ಯದರ್ಶಿಯಾಗಿ ಮಲಿಕ್ ಕುಂಪನಮಜಲು, ಆರೋಗ್ಯ ವಿಭಾಗದ ಕಾರ್ಯದರ್ಶಿ ಹಾಶೀರ್ ಪೇರಿಮಾರ್, ಶಿಕ್ಷಣ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಅರಫಾ, ಕ್ರೀಡಾ ವಿಭಾಗ ಕಾರ್ಯದರ್ಶಿ ಗಪೂರ್ ಹಸನ್ ಪುಂಚಮೆ, ಮೂಲ ಸೌಕರ್ಯ ವಿಭಾಗದ ಕಾರ್ಯದರ್ಶಿ ಇಮ್ರಾನ್ ಮಾರಿಪಳ್ಳ, ಕೋಶಾಧಿಕಾರಿ ಮುಸ್ತಫ ಮೇಲ್ಮನೆ, ಸಂಘಟನಾ ಕಾರ್ಯದರ್ಶಿ ಸಲಾಂ ಸುಜೀರ್, ಸಂಚಾಲಕರಾಗಿ ಅಸೀಫ್ ಬಜಾಲ್ ಆಯ್ಕೆಯಾದರು.
ಕಾರ್ಯಕಾರಣಿ ಸಮಿತಿಯ ನೂತನ ಸದಸ್ಯರಾಗಿ ಅಸೀಫ್ ಮೇಲ್ಮನೆ, ಶಾಹುಲ್ ಹಮೀದ್, ಹಕೀಂ ಮಾರಿಪಳ್ಳ, ಹರ್ಷದ್ ವಳವೂರು, ಜಾಫರ್ ಟಿ. ಎಚ್, ಅಶ್ರಫ್ ಮಲ್ಲಿ, ಅನೀಸ್ ಮಾರಿಪಳ್ಳ, ರಿಯಾಝ್ ಕುಂಪನಮಜಲು ಆಯ್ಕೆಯಾದರು.
ಹಾಶೀರ್ ಪೇರಿಮಾರ್ ಸ್ವಾಗತಿಸಿದರು, ಸಲಾಂ ಸುಜೀರ್ ವಾರ್ಷಿಕ ವರದಿ ವಾಚಿಸಿದರು, ಡೈಮಂಡ್ ಅಲ್ತಾಫ್ ಧನ್ಯವಾದ ಸಲ್ಲಿಸಿದರು.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…