ಬಂಟ್ವಾಳ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಬಿಡುಗಡೆಗೊಂಡ ಉತ್ತರ ಪ್ರದೇಶ ಮೂಲದ ಸುಮಾರು 18 ಮಂದಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ 247/2017 ಕಲಂ 379 & 34 i p c ಮಾನ್ಯ ಎ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯದ ಸಿ.ಸಿ ನಂಬ್ರ 1266/2018 ರ ಆರೋಪಿತರು ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದರು.
ಬಲಿಯಾ ಜಿಲ್ಲೆ, ಮತ್ತು ಘಾಜೀಯಾಪುರ ಉತ್ತರಪ್ರದೇಶ ರಾಜ್ಯದ 1] ಪೀಯುಶ್ ಕುಮಾರ್ 2] ವಿನಯ್ ಕುಮಾರ್ , 3] ಬ್ರಿಜಿ ನಾರಾಯಣ 4] ರವೀಂದ್ರ 5] ಕೃಪ ಶಂಕರ್ 6] ವಿವೇಕ್ ರಾಮ್ 7] ಬದ್ಧ ರಾಮ್ 8] ನಂದಿನಿ ರಾಮ್ 9] ಕಿಶೋರ್ ಕುಮಾರ್ 10] ಶಾಮ್ ಬಿಹಾರಿ ರಾಮ್ 11]ಪ್ರೇಮಾಚಂದ ರಾಮ್ 12 ] ಸತೇಂದ್ರ 13] ಭಗವಾನ್ ರಾಮ್14] ಉಮೇಶ್ ರಾಮ್ 15] ರಾಸ್ ಬಿಹಾರಿ ರಾಮ್ 16] ಭಗೀರಥಿ ಚೌಧರಿ 17] ಸುನೀಲ್ ರಾಮ್ 18] ನಂದಿಹಳ ರಾಮ್ ಎಂಬುವರನ್ನು ಪೋಲೀಸರು ಬಂಧಿಸಿದ್ದಾರೆ.
ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ. ಹಾಗೂ ಪೊಲೀಸ್ ಉಪನಿರೀಕ್ಷಕರಾದ ಹರೀಶ್ ಎಂ.ಆರ್ ರವರ ಮಾರ್ಗದರ್ಶನದಲ್ಲಿ ಉಪನಿರೀಕ್ಷಕ ರಾದ ಮೂರ್ತಿ ಹೆಚ್ ಸಿ ಗಣೇಶ್ ಪ್ರಸಾದ್ ಪಿ.ಸಿ ಯೋಗೇಶ್ . ಡಿ.ಎಲ್ ವಿಜಯ್ ಕುಮಾರ್ ಸುರೇಶ್ ಉಪ್ಪಾರ ರವರು ಉತ್ತರ ಪ್ರದೇಶಕ್ಕೆ ತೇರಳಿ ಮಾಹಿತಿ ಸಂಗ್ರಹಿಸಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಮಾನ್ಯ ನ್ಯಾಯಾಲಯವು ಸದ್ರಿ ಆರೋಪಿಗಳಿಗೆ ದಂಡ ವಿಧಿಸಿ ಪ್ರಕರಣ ಮುಕ್ತಾಯ ಮಾಡಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…