ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕೂತ ವಿಚಿತ್ರ ಘಟನೆ ನಡೆದಿದೆ. ಯುವತಿಯನ್ನು ಮನವೂಲಿಸಲು ವಿಫಲರಾದ ವಿಟ್ಲ ಪೊಲೀಸರು ರಾತ್ರಿ ಆಕೆಯನ್ನು ಠಾಣೆಗೆ ಕರೆದೊಯಿದ್ದಾರೆ.
ಉತ್ತರ ಭಾರತದ ಜಲಂದರ್ ಮೂಲದ ಯುವತಿ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈ ಸಂದರ್ಭ ಅಡ್ಯನಡ್ಕದ ಯುವಕನ ಪರಿಚಯವಾಗಿ ಪ್ರೇಮ ಬೆಳೆದು, ಹಣಕಾಸಿನ ವ್ಯವಹಾರಗಳೂ ನಡೆದಿದೆ ಎನ್ನಲಾಗಿದೆ. ಮಂಗಳವಾರ ಸಾಯಂಕಾಲ ಅಡ್ಯನಡ್ಕದ ಮನೆ ಬಳಿಗೆ ಬಂದ ಸಂತ್ರಸ್ತ ಯುವತಿಗೆ ಪ್ರೀತಿ ಮಾಡುವುದಾಗಿ ಹೇಳಿದ ಯುವಕ ಸಿಕ್ಕಿಲ್ಲ. ಇದರಿಂದ ಯುವಕನನ್ನು ತನಗೆ ಒಪ್ಪಿಸುವಂತೆ ಪಟ್ಟು ಹಿಡಿದು ಮನೆಯ ಮುಂದೆ ಕೂತಿದ್ದಾಳೆ. ಸ್ಥಳೀಯರು ಸ್ಥಳದಲ್ಲಿ ಜಮಾಯಿಸುತ್ತಿದ್ದಂತೆ ವಿಟ್ಲ ಠಾಣೆಯಿಂದ ಆಗಮಿಸಿದ ಪೊಲೀಸರು ಯುವತಿಯನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಸ್ಥಳದಲ್ಲಿ ಎರಡು ಸಮುದಾಯದ ಜನರು ಸೇರಿದ ಹಿನ್ನಲೆಯಲ್ಲಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿತ್ತು.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…