ಮದುವೆ ಆರತಕ್ಷತೆಯಲ್ಲಿ ಲಕ್ಷಾಂತರ ರೂ. ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವು
ಉಡುಪಿ: ಮದುವೆ ಆರತಕ್ಷತೆಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ನಗದು ಹಾಗೂ ಸೊತ್ತುಗಳಿದ್ದ ಬ್ಯಾಗ್ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ನೀಲಾವರದ ಜಯಶ್ರೀ ಸುರೇಶ್ ಎಂಬವರ ಮಗಳು ಸಮೀಕ್ಷಾ ಎಂಬವರ ಮದುವೆ ಆರತಕ್ಷತೆ ಸಮಾರಂಭ ಬ್ರಹ್ಮಾವರದ ಶ್ಯಾಮಿಲಿ ಶನಾಯ ಹಾಲ್ನಲ್ಲಿ ನಡೆದಿದ್ದು, ಈ ವೇಳೆ ಜಯಶ್ರೀ ತನ್ನ ಕೈಯಲ್ಲಿದ್ದ ಬ್ಯಾಗನ್ನು ಹಾಲ್ ಸ್ಟೇಜ್ನ ಕುರ್ಚಿಯ ಮೇಲೆ ಇಟ್ಟು ಮಗಳೊಂದಿಗೆ ಫೋಟೋ ತೆಗೆಸಿದ್ದರು. ಬಳಿಕ ಬಂದು ನೋಡಿದಾಗ ಬ್ಯಾಗ್ ಕಳವಾಗಿರುವುದು ಕಂಡುಬಂತು. ಬ್ಯಾಗ್ನಲ್ಲಿ 2,40,000 ರೂ. ಮೌಲ್ಯದ ನಗದು ಹಾಗೂ ವಸ್ತುಗಳಿದ್ದವು ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…