ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ವಿಷದ ಬಾಟಲಿ ನುಂಗಿದ ನಾಗರಹಾವಿನ ರಕ್ಷಣೆ

ಉಡುಪಿ: ಹಸುವಿನ ಮೈ ಮೇಲಿನ ಉಣ್ಣೆಗಳನ್ನು ನಿವಾರಣೆ ಮಾಡುವ ವಿಷದ ಬಾಟಲನ್ನು ನಾಗರಹಾವು ನುಂಗಿದ ಘಟನೆ ಉಡುಪಿಯ ನೀರೆ ಬೈಲೂರಿನಲ್ಲಿ ನಡೆದಿದೆ. ಸ್ಥಳೀಯ ಜಗದೀಶ್ ಎಂಬವರು ಉಡುಪಿಯ ಉರಗ ತಜ್ಞ ಗುರುರಾಜ್ ಸನಿಲ್ ಗೆ ಕರೆ ಮಾಡಿ ಮಾಹಿತಿ ನೀಡಿದರು. ಅದರಂತೆ ಗುರುರಾಜ್ ಸನಿಲ್ ಅವರು ಗೆಳೆಯರೊಂಗಿದೆ ತೆರಳಿ ಹಾವನ್ನು ಹಿಡಿದು ವಿಷದ ಬಾಟಲ್ ಹೊರ ತೆಗೆದು ರಕ್ಷಣೆ ಮಾಡಿದ್ದಾರೆ.


ಹಾವಿನ ರಕ್ಷಣೆಗೆ ಸ್ಥಳೀಯರು, ಉರಗ ತಜ್ಞರು ಹರಸಾಹಸ ಪಟ್ಟಿದ್ದಾರೆ. ಸ್ಥಳೀಯ ಜಗದೀಶ್ ಹಾಗೂ ಅವರ ಗೆಳೆಯ ಸುಜಿತ್ ಎಂಬವರು ಹಾವು ಅವಿತಿದ್ದ ಶೌಚಾಲಯದ ನೆಲವನ್ನು ಪೂರ್ಣ ಒಡೆದು ಕೊನೆಗೆ ಅದರ ಅಡಿಪಾಯದ ಕಲ್ಲುಗಳನ್ನು ಕಿತ್ತು ತೆಗೆದಿದ್ದಾರೆ. ಗುರುರಾಜ್ ಹಾವನ್ನು ಹೊರಗೆ ತರುವಲ್ಲಿ ಯಶಸ್ವಿಯಾದರು. ನಂತರ ಹಾವನ್ನು ಹಿಡಿದು ಪೂರ್ತಿ ಹೊಟ್ಟೆ ಸೇರಿದ್ದ ವಿಷದ ಬಾಟಲಿಯನ್ನು ಬಹಳ ಜಾಗರೂಕತೆಯಿಂದ ತಳ್ಳುತ್ತಾ ಹೊರ ತೆಗೆದಿದ್ದಾರೆ. ನೀರೆ ಗ್ರಾಮದ ರಿತೇಶ್ ಎಂಬವರು ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ. ಸ್ಥಳೀಯರ ವಿನಂತಿ ಮೇರೆಗೆ ಹಾವನ್ನು ನೀರೆ ಬೈಲೂರು ಸಮೀಪ ಕಾಡಿಗೆ ಬಿಡಲಾಗಿದೆ.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!