ಉಡುಪಿ: ಹಸುವಿನ ಮೈ ಮೇಲಿನ ಉಣ್ಣೆಗಳನ್ನು ನಿವಾರಣೆ ಮಾಡುವ ವಿಷದ ಬಾಟಲನ್ನು ನಾಗರಹಾವು ನುಂಗಿದ ಘಟನೆ ಉಡುಪಿಯ ನೀರೆ ಬೈಲೂರಿನಲ್ಲಿ ನಡೆದಿದೆ. ಸ್ಥಳೀಯ ಜಗದೀಶ್ ಎಂಬವರು ಉಡುಪಿಯ ಉರಗ ತಜ್ಞ ಗುರುರಾಜ್ ಸನಿಲ್ ಗೆ ಕರೆ ಮಾಡಿ ಮಾಹಿತಿ ನೀಡಿದರು. ಅದರಂತೆ ಗುರುರಾಜ್ ಸನಿಲ್ ಅವರು ಗೆಳೆಯರೊಂಗಿದೆ ತೆರಳಿ ಹಾವನ್ನು ಹಿಡಿದು ವಿಷದ ಬಾಟಲ್ ಹೊರ ತೆಗೆದು ರಕ್ಷಣೆ ಮಾಡಿದ್ದಾರೆ.
ಹಾವಿನ ರಕ್ಷಣೆಗೆ ಸ್ಥಳೀಯರು, ಉರಗ ತಜ್ಞರು ಹರಸಾಹಸ ಪಟ್ಟಿದ್ದಾರೆ. ಸ್ಥಳೀಯ ಜಗದೀಶ್ ಹಾಗೂ ಅವರ ಗೆಳೆಯ ಸುಜಿತ್ ಎಂಬವರು ಹಾವು ಅವಿತಿದ್ದ ಶೌಚಾಲಯದ ನೆಲವನ್ನು ಪೂರ್ಣ ಒಡೆದು ಕೊನೆಗೆ ಅದರ ಅಡಿಪಾಯದ ಕಲ್ಲುಗಳನ್ನು ಕಿತ್ತು ತೆಗೆದಿದ್ದಾರೆ. ಗುರುರಾಜ್ ಹಾವನ್ನು ಹೊರಗೆ ತರುವಲ್ಲಿ ಯಶಸ್ವಿಯಾದರು. ನಂತರ ಹಾವನ್ನು ಹಿಡಿದು ಪೂರ್ತಿ ಹೊಟ್ಟೆ ಸೇರಿದ್ದ ವಿಷದ ಬಾಟಲಿಯನ್ನು ಬಹಳ ಜಾಗರೂಕತೆಯಿಂದ ತಳ್ಳುತ್ತಾ ಹೊರ ತೆಗೆದಿದ್ದಾರೆ. ನೀರೆ ಗ್ರಾಮದ ರಿತೇಶ್ ಎಂಬವರು ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ. ಸ್ಥಳೀಯರ ವಿನಂತಿ ಮೇರೆಗೆ ಹಾವನ್ನು ನೀರೆ ಬೈಲೂರು ಸಮೀಪ ಕಾಡಿಗೆ ಬಿಡಲಾಗಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…