ಉಡುಪಿ: ಹಸುವಿನ ಮೈ ಮೇಲಿನ ಉಣ್ಣೆಗಳನ್ನು ನಿವಾರಣೆ ಮಾಡುವ ವಿಷದ ಬಾಟಲನ್ನು ನಾಗರಹಾವು ನುಂಗಿದ ಘಟನೆ ಉಡುಪಿಯ ನೀರೆ ಬೈಲೂರಿನಲ್ಲಿ ನಡೆದಿದೆ. ಸ್ಥಳೀಯ ಜಗದೀಶ್ ಎಂಬವರು ಉಡುಪಿಯ ಉರಗ ತಜ್ಞ ಗುರುರಾಜ್ ಸನಿಲ್ ಗೆ ಕರೆ ಮಾಡಿ ಮಾಹಿತಿ ನೀಡಿದರು. ಅದರಂತೆ ಗುರುರಾಜ್ ಸನಿಲ್ ಅವರು ಗೆಳೆಯರೊಂಗಿದೆ ತೆರಳಿ ಹಾವನ್ನು ಹಿಡಿದು ವಿಷದ ಬಾಟಲ್ ಹೊರ ತೆಗೆದು ರಕ್ಷಣೆ ಮಾಡಿದ್ದಾರೆ.
ಹಾವಿನ ರಕ್ಷಣೆಗೆ ಸ್ಥಳೀಯರು, ಉರಗ ತಜ್ಞರು ಹರಸಾಹಸ ಪಟ್ಟಿದ್ದಾರೆ. ಸ್ಥಳೀಯ ಜಗದೀಶ್ ಹಾಗೂ ಅವರ ಗೆಳೆಯ ಸುಜಿತ್ ಎಂಬವರು ಹಾವು ಅವಿತಿದ್ದ ಶೌಚಾಲಯದ ನೆಲವನ್ನು ಪೂರ್ಣ ಒಡೆದು ಕೊನೆಗೆ ಅದರ ಅಡಿಪಾಯದ ಕಲ್ಲುಗಳನ್ನು ಕಿತ್ತು ತೆಗೆದಿದ್ದಾರೆ. ಗುರುರಾಜ್ ಹಾವನ್ನು ಹೊರಗೆ ತರುವಲ್ಲಿ ಯಶಸ್ವಿಯಾದರು. ನಂತರ ಹಾವನ್ನು ಹಿಡಿದು ಪೂರ್ತಿ ಹೊಟ್ಟೆ ಸೇರಿದ್ದ ವಿಷದ ಬಾಟಲಿಯನ್ನು ಬಹಳ ಜಾಗರೂಕತೆಯಿಂದ ತಳ್ಳುತ್ತಾ ಹೊರ ತೆಗೆದಿದ್ದಾರೆ. ನೀರೆ ಗ್ರಾಮದ ರಿತೇಶ್ ಎಂಬವರು ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ. ಸ್ಥಳೀಯರ ವಿನಂತಿ ಮೇರೆಗೆ ಹಾವನ್ನು ನೀರೆ ಬೈಲೂರು ಸಮೀಪ ಕಾಡಿಗೆ ಬಿಡಲಾಗಿದೆ.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…