ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: MDMA ನಿದ್ರಾಜನಕ ಮಾದಕ ವಸ್ತುಗಳ ಮಾರಾಟ ಬೈಕಿನಲ್ಲಿ ರೈಡ್ ಮಾಡುತ್ತಿದ್ದ ಮೂವರ ಪೈಕಿ ಇಬ್ಬರನ್ನು ಬಂಧನ.

ಬಂಟ್ವಾಳ: MDMA ನಿದ್ರಾಜನಕ ಮಾದಕ ವಸ್ತುಗಳ ಮಾರಾಟ ಮಾಡಲು ಬೈಕಿನಲ್ಲಿ ರೈಡ್ ಮಾಡುತ್ತಿದ್ದ ಮೂವರ ಪೈಕಿ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿದ್ದು ಇನ್ನೋರ್ವ ಪರಾರಿಯಾಗಿರುವ ಘಟನೆ ನಡೆದಿದೆ.

ಮಂಚಿ ಗ್ರಾಮದ ಅಬ್ದುಲ್ ರಹೀಜ್ (23) ಸಹಸವಾರ ಮಂಚಿ ನಿವಾಸಿ ದಾವುದುಲ್ ಅಮೀರ್ (26) ಬಂಧಿತರಾಗಿದ್ದು ಇನ್ನೋರ್ವ ಸಹಸವಾರ ಬಂಟ್ವಾಳ ನಿವಾಸಿ ನಝೀರ್ ಎಂಬಾತ ಪರಾರಿಯಾಗಿದ್ದಾನೆ , ಈತನ ಮೇಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬಂಧಿತರ ಕೈಯಿಂದ ಸುಮಾರು 4 ಸಾವಿರ ರೂ ಮೌಲ್ಯದ 4 ಗ್ರಾಂ 04 ಮಿ.ಗ್ರಾಂ ತೂಕದ ನಿದ್ರಾಜನಕ MDMA ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರ ಠಾಣಾ ಎಸ್.ಐ.ಅವರು ಬ್ರಹ್ಮರಕೋಟ್ಲು ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವ ವೇಳೆ ನಂಬರ್ ಪ್ಲೇಟ್ ಇಲ್ಲದೆ ತ್ರಿಬಲ್ ರೈಡಿನಲ್ಲಿ ಬರುತ್ತಿದ್ದ ದ್ಬಿಚಕ್ರವಾಹನವೊಂದನ್ನು ನಿಲ್ಲಿಸಿ ಎಂದು ಸೂಚನೆ ನೀಡಿದಾಗ ಅದರಲ್ಲಿ ಓರ್ವ ಹಾರಿ ಪರಾರಿಯಾಗಿದ್ದ.
ಈ ಸಂದರ್ಭದಲ್ಲಿ ಸಂಶಯಗೊಂಡ ಎಸ್.ಐ. ಉಳಿದ ಇಬ್ಬರನ್ನು ವಿಚಾರಣೆ ನಡೆಸಿ ದಾಗ ಇವರು ನಿದ್ರಾಜನಕ ಮಾದಕವಸ್ತು ವನ್ನು ಸೇವನೆ ಮಾಡಿರುವುದು ಗಮನಕ್ಕೆ ಬಂದಿದೆ. ವಾಹನ ತಪಾಸಣೆ ನಡೆಸಿದಾಗ ಅದರಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಇರಿಸಲಾಗಿದ್ದ ಮಾದಕವಸ್ತು ಕಂಡು ಬಂದಿದ್ದು ,ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!