ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: MDMA ನಿದ್ರಾಜನಕ ಮಾದಕ ವಸ್ತುಗಳ ಮಾರಾಟ ಬೈಕಿನಲ್ಲಿ ರೈಡ್ ಮಾಡುತ್ತಿದ್ದ ಮೂವರ ಪೈಕಿ ಇಬ್ಬರನ್ನು ಬಂಧನ.

ಬಂಟ್ವಾಳ: MDMA ನಿದ್ರಾಜನಕ ಮಾದಕ ವಸ್ತುಗಳ ಮಾರಾಟ ಮಾಡಲು ಬೈಕಿನಲ್ಲಿ ರೈಡ್ ಮಾಡುತ್ತಿದ್ದ ಮೂವರ ಪೈಕಿ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿದ್ದು ಇನ್ನೋರ್ವ ಪರಾರಿಯಾಗಿರುವ ಘಟನೆ ನಡೆದಿದೆ.

ಮಂಚಿ ಗ್ರಾಮದ ಅಬ್ದುಲ್ ರಹೀಜ್ (23) ಸಹಸವಾರ ಮಂಚಿ ನಿವಾಸಿ ದಾವುದುಲ್ ಅಮೀರ್ (26) ಬಂಧಿತರಾಗಿದ್ದು ಇನ್ನೋರ್ವ ಸಹಸವಾರ ಬಂಟ್ವಾಳ ನಿವಾಸಿ ನಝೀರ್ ಎಂಬಾತ ಪರಾರಿಯಾಗಿದ್ದಾನೆ , ಈತನ ಮೇಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬಂಧಿತರ ಕೈಯಿಂದ ಸುಮಾರು 4 ಸಾವಿರ ರೂ ಮೌಲ್ಯದ 4 ಗ್ರಾಂ 04 ಮಿ.ಗ್ರಾಂ ತೂಕದ ನಿದ್ರಾಜನಕ MDMA ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರ ಠಾಣಾ ಎಸ್.ಐ.ಅವರು ಬ್ರಹ್ಮರಕೋಟ್ಲು ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವ ವೇಳೆ ನಂಬರ್ ಪ್ಲೇಟ್ ಇಲ್ಲದೆ ತ್ರಿಬಲ್ ರೈಡಿನಲ್ಲಿ ಬರುತ್ತಿದ್ದ ದ್ಬಿಚಕ್ರವಾಹನವೊಂದನ್ನು ನಿಲ್ಲಿಸಿ ಎಂದು ಸೂಚನೆ ನೀಡಿದಾಗ ಅದರಲ್ಲಿ ಓರ್ವ ಹಾರಿ ಪರಾರಿಯಾಗಿದ್ದ.
ಈ ಸಂದರ್ಭದಲ್ಲಿ ಸಂಶಯಗೊಂಡ ಎಸ್.ಐ. ಉಳಿದ ಇಬ್ಬರನ್ನು ವಿಚಾರಣೆ ನಡೆಸಿ ದಾಗ ಇವರು ನಿದ್ರಾಜನಕ ಮಾದಕವಸ್ತು ವನ್ನು ಸೇವನೆ ಮಾಡಿರುವುದು ಗಮನಕ್ಕೆ ಬಂದಿದೆ. ವಾಹನ ತಪಾಸಣೆ ನಡೆಸಿದಾಗ ಅದರಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಇರಿಸಲಾಗಿದ್ದ ಮಾದಕವಸ್ತು ಕಂಡು ಬಂದಿದ್ದು ,ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!