ಬಂಟ್ವಾಳ: MDMA ನಿದ್ರಾಜನಕ ಮಾದಕ ವಸ್ತುಗಳ ಮಾರಾಟ ಮಾಡಲು ಬೈಕಿನಲ್ಲಿ ರೈಡ್ ಮಾಡುತ್ತಿದ್ದ ಮೂವರ ಪೈಕಿ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿದ್ದು ಇನ್ನೋರ್ವ ಪರಾರಿಯಾಗಿರುವ ಘಟನೆ ನಡೆದಿದೆ.
ಮಂಚಿ ಗ್ರಾಮದ ಅಬ್ದುಲ್ ರಹೀಜ್ (23) ಸಹಸವಾರ ಮಂಚಿ ನಿವಾಸಿ ದಾವುದುಲ್ ಅಮೀರ್ (26) ಬಂಧಿತರಾಗಿದ್ದು ಇನ್ನೋರ್ವ ಸಹಸವಾರ ಬಂಟ್ವಾಳ ನಿವಾಸಿ ನಝೀರ್ ಎಂಬಾತ ಪರಾರಿಯಾಗಿದ್ದಾನೆ , ಈತನ ಮೇಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬಂಧಿತರ ಕೈಯಿಂದ ಸುಮಾರು 4 ಸಾವಿರ ರೂ ಮೌಲ್ಯದ 4 ಗ್ರಾಂ 04 ಮಿ.ಗ್ರಾಂ ತೂಕದ ನಿದ್ರಾಜನಕ MDMA ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರ ಠಾಣಾ ಎಸ್.ಐ.ಅವರು ಬ್ರಹ್ಮರಕೋಟ್ಲು ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವ ವೇಳೆ ನಂಬರ್ ಪ್ಲೇಟ್ ಇಲ್ಲದೆ ತ್ರಿಬಲ್ ರೈಡಿನಲ್ಲಿ ಬರುತ್ತಿದ್ದ ದ್ಬಿಚಕ್ರವಾಹನವೊಂದನ್ನು ನಿಲ್ಲಿಸಿ ಎಂದು ಸೂಚನೆ ನೀಡಿದಾಗ ಅದರಲ್ಲಿ ಓರ್ವ ಹಾರಿ ಪರಾರಿಯಾಗಿದ್ದ.
ಈ ಸಂದರ್ಭದಲ್ಲಿ ಸಂಶಯಗೊಂಡ ಎಸ್.ಐ. ಉಳಿದ ಇಬ್ಬರನ್ನು ವಿಚಾರಣೆ ನಡೆಸಿ ದಾಗ ಇವರು ನಿದ್ರಾಜನಕ ಮಾದಕವಸ್ತು ವನ್ನು ಸೇವನೆ ಮಾಡಿರುವುದು ಗಮನಕ್ಕೆ ಬಂದಿದೆ. ವಾಹನ ತಪಾಸಣೆ ನಡೆಸಿದಾಗ ಅದರಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಇರಿಸಲಾಗಿದ್ದ ಮಾದಕವಸ್ತು ಕಂಡು ಬಂದಿದ್ದು ,ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…