ಬಂಟ್ವಾಳ: MDMA ನಿದ್ರಾಜನಕ ಮಾದಕ ವಸ್ತುಗಳ ಮಾರಾಟ ಮಾಡಲು ಬೈಕಿನಲ್ಲಿ ರೈಡ್ ಮಾಡುತ್ತಿದ್ದ ಮೂವರ ಪೈಕಿ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿದ್ದು ಇನ್ನೋರ್ವ ಪರಾರಿಯಾಗಿರುವ ಘಟನೆ ನಡೆದಿದೆ.
ಮಂಚಿ ಗ್ರಾಮದ ಅಬ್ದುಲ್ ರಹೀಜ್ (23) ಸಹಸವಾರ ಮಂಚಿ ನಿವಾಸಿ ದಾವುದುಲ್ ಅಮೀರ್ (26) ಬಂಧಿತರಾಗಿದ್ದು ಇನ್ನೋರ್ವ ಸಹಸವಾರ ಬಂಟ್ವಾಳ ನಿವಾಸಿ ನಝೀರ್ ಎಂಬಾತ ಪರಾರಿಯಾಗಿದ್ದಾನೆ , ಈತನ ಮೇಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬಂಧಿತರ ಕೈಯಿಂದ ಸುಮಾರು 4 ಸಾವಿರ ರೂ ಮೌಲ್ಯದ 4 ಗ್ರಾಂ 04 ಮಿ.ಗ್ರಾಂ ತೂಕದ ನಿದ್ರಾಜನಕ MDMA ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರ ಠಾಣಾ ಎಸ್.ಐ.ಅವರು ಬ್ರಹ್ಮರಕೋಟ್ಲು ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವ ವೇಳೆ ನಂಬರ್ ಪ್ಲೇಟ್ ಇಲ್ಲದೆ ತ್ರಿಬಲ್ ರೈಡಿನಲ್ಲಿ ಬರುತ್ತಿದ್ದ ದ್ಬಿಚಕ್ರವಾಹನವೊಂದನ್ನು ನಿಲ್ಲಿಸಿ ಎಂದು ಸೂಚನೆ ನೀಡಿದಾಗ ಅದರಲ್ಲಿ ಓರ್ವ ಹಾರಿ ಪರಾರಿಯಾಗಿದ್ದ.
ಈ ಸಂದರ್ಭದಲ್ಲಿ ಸಂಶಯಗೊಂಡ ಎಸ್.ಐ. ಉಳಿದ ಇಬ್ಬರನ್ನು ವಿಚಾರಣೆ ನಡೆಸಿ ದಾಗ ಇವರು ನಿದ್ರಾಜನಕ ಮಾದಕವಸ್ತು ವನ್ನು ಸೇವನೆ ಮಾಡಿರುವುದು ಗಮನಕ್ಕೆ ಬಂದಿದೆ. ವಾಹನ ತಪಾಸಣೆ ನಡೆಸಿದಾಗ ಅದರಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಇರಿಸಲಾಗಿದ್ದ ಮಾದಕವಸ್ತು ಕಂಡು ಬಂದಿದ್ದು ,ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…