ಬಂಟ್ವಾಳ: MDMA ನಿದ್ರಾಜನಕ ಮಾದಕ ವಸ್ತುಗಳ ಮಾರಾಟ ಮಾಡಲು ಬೈಕಿನಲ್ಲಿ ರೈಡ್ ಮಾಡುತ್ತಿದ್ದ ಮೂವರ ಪೈಕಿ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿದ್ದು ಇನ್ನೋರ್ವ ಪರಾರಿಯಾಗಿರುವ ಘಟನೆ ನಡೆದಿದೆ.
ಮಂಚಿ ಗ್ರಾಮದ ಅಬ್ದುಲ್ ರಹೀಜ್ (23) ಸಹಸವಾರ ಮಂಚಿ ನಿವಾಸಿ ದಾವುದುಲ್ ಅಮೀರ್ (26) ಬಂಧಿತರಾಗಿದ್ದು ಇನ್ನೋರ್ವ ಸಹಸವಾರ ಬಂಟ್ವಾಳ ನಿವಾಸಿ ನಝೀರ್ ಎಂಬಾತ ಪರಾರಿಯಾಗಿದ್ದಾನೆ , ಈತನ ಮೇಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬಂಧಿತರ ಕೈಯಿಂದ ಸುಮಾರು 4 ಸಾವಿರ ರೂ ಮೌಲ್ಯದ 4 ಗ್ರಾಂ 04 ಮಿ.ಗ್ರಾಂ ತೂಕದ ನಿದ್ರಾಜನಕ MDMA ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರ ಠಾಣಾ ಎಸ್.ಐ.ಅವರು ಬ್ರಹ್ಮರಕೋಟ್ಲು ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವ ವೇಳೆ ನಂಬರ್ ಪ್ಲೇಟ್ ಇಲ್ಲದೆ ತ್ರಿಬಲ್ ರೈಡಿನಲ್ಲಿ ಬರುತ್ತಿದ್ದ ದ್ಬಿಚಕ್ರವಾಹನವೊಂದನ್ನು ನಿಲ್ಲಿಸಿ ಎಂದು ಸೂಚನೆ ನೀಡಿದಾಗ ಅದರಲ್ಲಿ ಓರ್ವ ಹಾರಿ ಪರಾರಿಯಾಗಿದ್ದ.
ಈ ಸಂದರ್ಭದಲ್ಲಿ ಸಂಶಯಗೊಂಡ ಎಸ್.ಐ. ಉಳಿದ ಇಬ್ಬರನ್ನು ವಿಚಾರಣೆ ನಡೆಸಿ ದಾಗ ಇವರು ನಿದ್ರಾಜನಕ ಮಾದಕವಸ್ತು ವನ್ನು ಸೇವನೆ ಮಾಡಿರುವುದು ಗಮನಕ್ಕೆ ಬಂದಿದೆ. ವಾಹನ ತಪಾಸಣೆ ನಡೆಸಿದಾಗ ಅದರಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಇರಿಸಲಾಗಿದ್ದ ಮಾದಕವಸ್ತು ಕಂಡು ಬಂದಿದ್ದು ,ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…