ಜನ ಮನದ ನಾಡಿ ಮಿಡಿತ

Advertisement

ಉಡುಪಿ ನೋಂದಣಿ ಕಚೇರಿಗೆ ಲೋಕಾಯುಕ್ತ ಎಸ್ಪಿ ದಾಳಿ

ಉಡುಪಿ: ದೊಡ್ಡ ಪ್ರಮಾಣದ ಭ್ರಷ್ಟಾಚಾರದ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಉಡುಪಿ ನೋಂದಣಿ ಕಚೇರಿಗೆ ದಾಳಿ ನಡೆಸಿ ಸರ್ಚ್ ವಾರೆಂಟ್‌ನೊಂದಿಗೆ ತನಿಖೆ ನಡೆಸಲಾಯಿತು.

ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಉಡುಪಿ ಜಿಲ್ಲೆಗೆ ನೀಡಿದ ಮೂರು ದಿನಗಳ ಭೇಟಿಯ ಸಂದರ್ಭದಲ್ಲಿ ವಕೀಲರೊಂದಿಗೆ ನಡೆಸಿದ ಸಂವಾದ ವೇಳೆ ಉಡುಪಿಯ ನೊಂದಣಿ ಕಚೇರಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ದೂರು ಬಂದಿತ್ತು. ಅಲ್ಲದೆ, ಸಂವಾದದ ವೇಳೆ ವಕೀಲರ ಸಂಘದ ಹಲವರು ಮಂದಿ ನೋಂದಣಿ ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ನ್ಯಾಯಮೂರ್ತಿ ಕೆ. ಎನ್.ಫಣೀಂದ್ರರ ಗಮನ ಸೆಳೆದಿದ್ದರು.
ಉಪಲೋಕಾಯುಕ್ತರು ಒಂದೇ ದಿನದಲ್ಲಿ ಉಡುಪಿ ನೋಂದಣಿ ಕಚೇರಿಯ ತನಿಖೆಗೆ ಸರ್ಚ್ ವಾರಂಟ್ ಹೊರಡಿಸಿದ್ದು, ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತದ ಎಸ್ಪಿ ಅವರಿಗೆ ಆದೇಶಿಸಿದ್ದರು.
ಮಂಗಳೂರಿನ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲಿಸಿದರು. ಆದರೆ ಈ ಸಂದರ್ಭದಲ್ಲಿ ಯಾವುದೇ ಅವ್ಯವಹಾರ, ಭ್ರಷ್ಟಾಚಾರದ ಪುರಾವೆ ತಂಡ ದೊರೆಯಲಿಲ್ಲ ಎನ್ನಲಾಗಿದೆ.
ಲೋಕಾಯುಕ್ತ ಎಸ್ಪಿ ತಂಡದ ತನಿಖೆ ಹಾಗೂ ಪರಿಶೀಲನೆಯ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ವಕೀಲರು ಹಾಜರಿದ್ದರು.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!