ಉಡುಪಿ: ದೊಡ್ಡ ಪ್ರಮಾಣದ ಭ್ರಷ್ಟಾಚಾರದ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಉಡುಪಿ ನೋಂದಣಿ ಕಚೇರಿಗೆ ದಾಳಿ ನಡೆಸಿ ಸರ್ಚ್ ವಾರೆಂಟ್ನೊಂದಿಗೆ ತನಿಖೆ ನಡೆಸಲಾಯಿತು.
ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಉಡುಪಿ ಜಿಲ್ಲೆಗೆ ನೀಡಿದ ಮೂರು ದಿನಗಳ ಭೇಟಿಯ ಸಂದರ್ಭದಲ್ಲಿ ವಕೀಲರೊಂದಿಗೆ ನಡೆಸಿದ ಸಂವಾದ ವೇಳೆ ಉಡುಪಿಯ ನೊಂದಣಿ ಕಚೇರಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ದೂರು ಬಂದಿತ್ತು. ಅಲ್ಲದೆ, ಸಂವಾದದ ವೇಳೆ ವಕೀಲರ ಸಂಘದ ಹಲವರು ಮಂದಿ ನೋಂದಣಿ ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ನ್ಯಾಯಮೂರ್ತಿ ಕೆ. ಎನ್.ಫಣೀಂದ್ರರ ಗಮನ ಸೆಳೆದಿದ್ದರು.
ಉಪಲೋಕಾಯುಕ್ತರು ಒಂದೇ ದಿನದಲ್ಲಿ ಉಡುಪಿ ನೋಂದಣಿ ಕಚೇರಿಯ ತನಿಖೆಗೆ ಸರ್ಚ್ ವಾರಂಟ್ ಹೊರಡಿಸಿದ್ದು, ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತದ ಎಸ್ಪಿ ಅವರಿಗೆ ಆದೇಶಿಸಿದ್ದರು.
ಮಂಗಳೂರಿನ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲಿಸಿದರು. ಆದರೆ ಈ ಸಂದರ್ಭದಲ್ಲಿ ಯಾವುದೇ ಅವ್ಯವಹಾರ, ಭ್ರಷ್ಟಾಚಾರದ ಪುರಾವೆ ತಂಡ ದೊರೆಯಲಿಲ್ಲ ಎನ್ನಲಾಗಿದೆ.
ಲೋಕಾಯುಕ್ತ ಎಸ್ಪಿ ತಂಡದ ತನಿಖೆ ಹಾಗೂ ಪರಿಶೀಲನೆಯ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ವಕೀಲರು ಹಾಜರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…