ಡ್ರೆಸ್ ಕೋಡ್, ಭೂಮಿ ಅತಿಕ್ರಮಣ, ಸರಕಾರೀಕರಣದಿಂದ ಮುಕ್ತ ವಿಷಯದ ಕುರಿತು ಚರ್ಚೆ
ಉಡುಪಿ: ಹಿಂದೂ ಜನಜಾಗೃತಿ ಸಮಿತಿ ಮತ್ತು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯುಕ್ತ ಆಶ್ರಯದಲ್ಲಿ ದೇವಸ್ಥಾನ, ಸಂಸ್ಕೃತಿಯ ರಕ್ಷಣೆಗಾಗಿ ‘ಜಿಲ್ಲಾ ಮಟ್ಟದ ದೇವಸ್ಥಾನ ಪರಿಷತ್ತು’ ಅನ್ನು ಇದೇ ಬರುವ ಫೆ. 11ರಂದು ಉಡುಪಿ ಕಿದಿಯೂರು ಹೋಟೆಲ್ ನ ಮಾಧವ ಕೃಷ್ಣ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಉಡುಪಿ ಜಿಲ್ಲಾ ಸಂಯೋಜಕ ಚಂದ್ರ ಮೊಗವೀರ ಹೇಳಿದರು.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪರಿಷತ್ತಿನಲ್ಲಿ ಜಿಲ್ಲೆಯ ಅನೇಕ ಕಡೆಗಳಿಂದ 300ಕ್ಕಿಂತ ಹೆಚ್ಚು ವಿಶ್ವಸ್ಥರು ಉಪಸ್ಥಿತರಿರಲಿದ್ದಾರೆ. ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಆಯ್ದ ವಿವಿಧ ವಿಷಯಗಳ ಚರ್ಚಾಕೂಟಗಳು ನಡೆಯಲಿವೆ. ಇದರಲ್ಲಿ ‘ದೇವಸ್ಥಾನಗಳನ್ನು ಸನಾತನ ಧರ್ಮಪ್ರಸಾರ ಕೇಂದ್ರಗಳನ್ನಾಗಿಸುವುದು’, ‘ದೇವಸ್ಥಾನಗಳನ್ನು ಸರಕಾರೀಕರಣದಿಂದ ಮುಕ್ತಮಾಡುವುದು,’ ಅನಧಿಕೃತ ಹೆಸರಿನಲ್ಲಿ ದೇವಸ್ಥಾನಗಳನ್ನು ಧ್ವಂಸಗೊಳಿಸುವುದು, ಅನ್ಯಮತೀಯರಿಂದ ದೇವಸ್ಥಾನಗಳ ಭೂಮಿಯ ಅತಿಕ್ರಮಣ ಮತ್ತು ಸರಕಾರವು ದೇವಸ್ಥಾನಗಳನ್ನು ವಶಪಡಿಸಿಕೊಳ್ಳುವುದರ ವಿರುಧ್ಧ ಪರಿಹಾರೋಪಾಯ, ದೇವಸ್ಥಾನ ಮತ್ತು ತೀರ್ಥಕ್ಷೇತ್ರಗಳ ಪರಿಸರದಲ್ಲಿ ಮದ್ಯ-ಮಾಂಸ ಇವುಗಳ ನಿಷೇಧ ಮುಂತಾದ ವಿಷಯಗಳ ಮೇಲೆ ಚರ್ಚೆ ನಡೆಯಲಿದೆ ಎಂದರು.
ಮಹಾಸಂಘವು ಕೇವಲ 6 ತಿಂಗಳುಗಳಲ್ಲಿ ದೇಶದಾದ್ಯಂತ 275 ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ(ಡ್ರೆಸ್ ಕೋಡ್) ಜಾರಿಗೆ ತಂದಿದೆ. ಮಹಾಸಂಘದ ಅಭಿಯಾನದಿಂದ ಪ್ರೇರಿತಾರದ ಅನೇಕ ವಿಶ್ವಸ್ಥರು ತಮ್ಮ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುತ್ತಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕೆರ್ವಾಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ರಮೇಶ ಕಾರ್ಣಿಕ್, ಅಂಬಾಗಿಲು ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಸಹ ಮೊಕ್ತೇಸರ ರಾಜೇಶ್ ಶೇಟ್, ಉಡುಪಿ ಜಿಲ್ಲಾ ಸಮಿತಿ ಸೇವಕ ವಿಶ್ವನಾಥ ನಾಯಕ್ ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…