ಕರಾವಳಿ

ವಾಕ್ ಶ್ರವಣದೋಷ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ 2024

ಪ್ರತಿಯೊಂದು ಮಗುವಿನಲ್ಲಿಯೂ ಉತ್ತಮ ಅಂಶಗಳಿದ್ದು ಅದನ್ನು ಕಾಣುವ ಮತ್ತು ಕಂಡುಹಿಡಿಯುವ ಮನಸ್ಸು ಮುಖ್ಯ ಯಾವುದೇ ಒಂದು ಸಾಧನೆಯನ್ನು ಅಂಕಗಳಿಂದ ಅಳಿಯುವುದು ಸರಿಯಲ್ಲ ವಿಶೇಷ ಅಗತ್ಯವುಳ್ಳ ಮಗುವಿನಲ್ಲೂ ಅಸಾಧಾರಣವಾದ ಸಾಧನೆಯನ್ನು ಮಾಡುವ ಛಲ ಇದೆ ಅದನ್ನು ಎಳವೆಯಲ್ಲಿ ಗುರುತಿಸಿ ಪ್ರೋತ್ಸಾಹ ನೀಡಿದಾಗ ಮತ್ತು ಆ ಸಾಧನೆಗೆ ನೀರು ಎರೆದಾಗ ಉತ್ತಮ ಫಲವನ್ನು ಕಂಡುಕೊಳ್ಳಲು ಸಾಧ್ಯ ವಿಶೇಷ ಅಗತ್ಯವುಳ್ಳ ಮಗು ಸಮಾಜದಲ್ಲಿ ಎಲ್ಲರ ಜೊತೆಗೆ ಬೆರೆಯುವ ಅವಕಾಶ ನೀಡಿ ಆ ಮಗು ಕೂಡ ಇತರ ಮಗುವಿನಂತೆ ಸುಂದರ ಬದುಕು ಕಾಣಲು ಸಮಾಜದ ಪ್ರೋತ್ಸಾಹ ಅತಿ ಅಗತ್ಯವಾಗಿದೆ ಎಂದು ಲಯನ್ಸ ಕ್ಲಬ್ ವಿಟ್ಲ ಇಲ್ಲಿನ ಅಧ್ಯಕ್ಷೆ ಜಲಜಾಕ್ಷಿ ಬಾಲಕೃಷ್ಣ ಗೌಡ ರವರು ದ.ಕ.ಜಿ.ಪಂ.ಹಿ. ಪ್ರಾ. ಶಾಲೆ ಮಜಿ ವೀರಕಂಬ ಇಲ್ಲಿ ಶಿಕ್ಷಣ ಇಲಾಖೆ, ಲಯನ್ಸ್ ಕ್ಲಬ್ ವಿಟ್ಲ, ದಕ್ಷಿಣ ಕನ್ನಡ ಕದಳಿ ಮಹಿಳಾ ವೇದಿಕೆ ಹಾಗೂ ವಾಕ್ ಮತ್ತು ಶ್ರವಣ ವಿಭಾಗ ಯನೆಪೋಯ ಕಾಲೇಜು ಹಾಸ್ಪಿಟಲ್ ದೇರಳಕಟ್ಟೆ ಇದರ ಸಹಯೋಗದಲ್ಲಿ ವಾಕ್ ಶ್ರವಣದೋಷ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ 2024 ಇದನ್ನು ಉದ್ಘಾಟಿಸಿ ಮಾತನಾಡಿದರು.


ಆರೋಗ್ಯ ಶಿಬಿರಗಳು ಗ್ರಾಮ ಹಂತದಲ್ಲಿ ನಡೆದಾಗ ಮೂಲೆ ಮೂಲೆಯ ವ್ಯಕ್ತಿಗಳಿಗೆ ತಮ್ಮ ಆರೋಗ್ಯ ಸಮಸ್ಯೆಯನ್ನು ತಕ್ಷಣದಲ್ಲಿ ಕಂಡುಹಿಡಿದು ಸುಧಾರಿಸಲು ನೆರವಾಗುತ್ತದೆ ಈ ರೀತಿಯಾಗಿ ಯನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಉತ್ತಮವಾದ ಕೆಲಸ ಕಾರ್ಯಗಳನ್ನು ಮಾಡುತ್ತಿವೆ ಇವರ ಆರೋಗ್ಯ ಕಾಳಜಿಯು ನಿಜಕ್ಕೂ ಶ್ಲಾಘನೀಯವಾದದ್ದು ಎಂದು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಇವರು ಮಾತನಾಡಿದರು.


ಮಗುವಿನ ಚಟುವಟಿಕೆ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿಯೇ ಮಗುವಿನ ಬಗ್ಗೆ ತಿಳುವಳಿಕೆ ಪಡೆದುಕೊಂಡು ಅದರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿದಾಗ ವಿಶೇಷ ಅಗತ್ಯವುಳ್ಳ ಮಗುವಿನ ಬಗ್ಗೆ ಇರುವ ದೋಷವನ್ನು ನಿವಾರಿಸಲು ಸುಲಭವಾಗುತ್ತದೆ. ಪ್ರತಿಯೊಂದು ಮಗು ವಿಶೇಷವಾಗಿದೆ ಮಗುವಿನ ಬೆಳವಣಿಗೆಯು ಗಮನಾಹ೯ವಾದ ಬದಲಾವಣೆಯನ್ನು ತಕ್ಷಣ ಸ್ಪಂದನೆಗೆ ಒಳಪಡಿಸಿದಾಗ ಮಗು ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಮಗುವಿನ ಮಾನಸಿಕ ಬೌದ್ಧಿಕ ಹಾಗೂ ದೈಹಿಕ ಬದಲಾವಣೆ ಬಗ್ಗೆ ಪೋಷಕರು ಗಮನಹರಿಸಬೇಕು ಮತ್ತು ಸೂಕ್ತ ಪರಿಹಾರವನ್ನು ಕಂಡುಕೊಳ್ಳಲು ಪ್ರಯತ್ನ ಪಡಬೇಕು ಎಂದು ದಕ್ಷಿಣ ಕನ್ನಡ ಕದಳಿ ಮಹಿಳಾ ವೇದಿಕೆ ಆದ್ಯೆಕ್ಷೆ ಬಂಟ್ವಾಳ ತಾಲೂಕು ವಿಶೇಷ ಸಂಪನ್ಮೂಲ ಅಧಿಕಾರಿ ಸುರೇಖಾ ಯಾಳವಾರ ಇವರು ತಮ್ಮ ಪ್ರಸ್ತಾವಿಕ ಮಾತಿನಲ್ಲಿ ತಿಳಿಸಿದರು.


ಈ ಸಂದರ್ಭದಲ್ಲಿ 14 ರಿಂದ 17 ರ ವಯೋಮಿತಿ ಒಳಗಿನ ವಿಶೇಷ ಚೇತನ ಬಾಲಕ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟದ ಜಾವಲಿನ್ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಹಾಗೂ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದ ಸುಜೀರ್ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿ ಮಾ| ಭವಿಷ್ ಇವರನ್ನು ಅಭಿನಂದಿಸಲಾಯಿತು.
ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ ನಾರುಕೋಡಿ , ವಾಕ್ ಮತ್ತು ಶ್ರವಣ ವಿಭಾಗ ಯನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಇದರ ಎಚ್ ಒ ಡಿ ಶ್ವೇತಾ ಪ್ರಭು, ಮೆಡಿಕಲ್ ಕಾಲೇಜಿನ ನಿಮಲ್ಕಾ, ಮೇಲ್ಕಾರಿನ ಚಂದ್ರಿಕಾ ವೆಜಿಟೇಬಲ್ಸ್ ಇದರ ಮಾಲಕರಾದ ಮಹಮ್ಮದ್ ಶರೀಫ್, ಲಯನ್ಸ್ ಕ್ಲಬ್ ವಿಟ್ಲ ಇಲ್ಲಿನ ನಿಕಟಪೂರ್ವ ಅಧ್ಯಕ್ಷರಾದ ಸುದೇಶ್ ಭಂಡಾರಿ, ವೀರಕಂಬ ಸಮುದಾಯ ಆರೋಗ್ಯ ಅಧಿಕಾರಿ ಹರ್ಷಿತ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಮೇಶ್ ಗೌಡ ಮೈರ , ಬಂಡವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಗೌರವ ಅಧ್ಯಕ್ಷರಾದ ರತ್ನಾವತಿ, ಸಂಪನ್ಮೂಲ ವ್ಯಕ್ತಿಗಳಾದ ಕಿರಣಕುಮಾರಿ, ಪ್ರಶಾಂತ್, ರವೀಂದ್ರ ರವರು ಉಪಸ್ಥಿತರಿದ್ದರು.


ಮುಖ್ಯ ಶಿಕ್ಷಕಿ ಶ್ರೀಮತಿ ಬೆನಡಿಕ್ಟ ಸ್ವಾಗತಿಸಿ ಸಹ ಶಿಕ್ಷಕಿ ಅನುಷಾ ವಂದಿಸಿ , ಸಹ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕರು ಸಹಕರಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

7 days ago