ಜನ ಮನದ ನಾಡಿ ಮಿಡಿತ

Advertisement

ದುಡಿಯುವ ಮಕ್ಕಳಿಗೆ ಮಿಡಿದ ನ್ಯಾಯಾಧೀಶೆ


ಉಡುಪಿ: ದುಡಿಯುವ ಮಕ್ಕಳಿಗೆ ನ್ಯಾಯಾಧೀಶೆಯ ಮನ ಮಿಡಿದಿದೆ. ಮಧ್ಯಾಹ್ನ ನಗರದ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಹೊರ ರಾಜ್ಯದ ಮಹಿಳೆಯೊಬ್ಬರು ಇಬ್ಬರು ಪುಟಾಣಿ ಮಕ್ಕಳ ಮೂಲಕ ರಸ್ತೆಯಲ್ಲಿ ಕಲಾಕೃತಿಯುಳ್ಳ ಸಣ್ಣ ಪುಸ್ತಕಗಳನ್ನು ಮಾರಾಟ ಮಾಡಿಸುತ್ತಿದ್ದರು.

ಇದನ್ನು ಗಮನಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ.ಎಸ್ ತಕ್ಷಣ ಪೋಲಿಸರಿಗೆ ಮಾಹಿತಿ ನೀಡಿ, ಮಕ್ಕಳನ್ನು ರಕ್ಷಿಸಿದ್ದಾರೆ. ಹಿರಿಯ ಸಿವಿಲ್ ನ್ಯಾಯಧೀಶೆ ಮಹಿಳೆಯನ್ನು ಪ್ರಶ್ನಿಸಲು ಆರಂಭಿಸಿದಾಗ, ಕಣ್ಣೀರಿಡುತ್ತಾ ಮಾತು ಆರಂಭಿಸಿದ ಮಹಿಳೆ, ಹೊಟ್ಟೆಗೆ ತಿನ್ನಲು ಸರಿಯಾದ ವ್ಯವಸ್ಥೆ ಇಲ್ಲ. ಅದಕ್ಕಾಗಿ ಸಣ್ಣ ಕಲಾಕೃತಿಯುಳ್ಳ ಪುಸ್ತಕಗಳನ್ನು ಮಾರಾಟ ಮಾಡುತ್ತಿದ್ದೇನೆ ಎಂದು ಗದ್ಗದಿತವಾಗಿ ಉತ್ತರಿಸುತ್ತಾ ಸುತ್ತಲು ಸೇರಿದ್ದವರ ಸಿಂಪತಿಯನ್ನು ಗಿಟ್ಟಿಸಿಕೊಳ್ಳಲು ಪ್ರಯತ್ನಿಸಿದರು.

ಬೆಳಗ್ಗಿನಿಂದಲೇ ಮಹಿಳೆಯೂ ಇಬ್ಬರು ಮಕ್ಕಳ ಮೂಲಕ ವ್ಯಾಪರ ನಡೆಸುತ್ತಿದ್ದರು ಎಂದು ಸ್ಥಳೀಯರು ದೂರಿದ್ದಾರೆ. ಮಧ್ಯಾಹ್ನ 2.30 ರ ಸುಮಾರಿಗೆ ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ ಅವರು, ಮಹಿಳೆ ನೆರಳಲ್ಲಿ ಕೂತುಕೊಂಡಿದ್ದು, ವಾಹನಗಳು ಓಡಾಡುವ ರಸ್ತೆಯಲ್ಲಿ ಮಕ್ಕಳು ವಾಹನಕ್ಕೆ ಅಡ್ಡವಾಗಿ ಓಡಿ ಬರುತ್ತಾ ವಸ್ತುಗಳನ್ನು ಮಾರಾಟಕ್ಕೆ ಯತ್ನಿಸುತ್ತಿರುವುದನ್ನು ಗಮನಿಸಿ, ಮಹಿಳಾ ಠಾಣೆ, ಮಕ್ಕಳ ರಕ್ಷಣಾ ಘಟಕ ಹಾಗು ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!