ಉಡುಪಿ: ದುಡಿಯುವ ಮಕ್ಕಳಿಗೆ ನ್ಯಾಯಾಧೀಶೆಯ ಮನ ಮಿಡಿದಿದೆ. ಮಧ್ಯಾಹ್ನ ನಗರದ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಹೊರ ರಾಜ್ಯದ ಮಹಿಳೆಯೊಬ್ಬರು ಇಬ್ಬರು ಪುಟಾಣಿ ಮಕ್ಕಳ ಮೂಲಕ ರಸ್ತೆಯಲ್ಲಿ ಕಲಾಕೃತಿಯುಳ್ಳ ಸಣ್ಣ ಪುಸ್ತಕಗಳನ್ನು ಮಾರಾಟ ಮಾಡಿಸುತ್ತಿದ್ದರು.
ಇದನ್ನು ಗಮನಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ.ಎಸ್ ತಕ್ಷಣ ಪೋಲಿಸರಿಗೆ ಮಾಹಿತಿ ನೀಡಿ, ಮಕ್ಕಳನ್ನು ರಕ್ಷಿಸಿದ್ದಾರೆ. ಹಿರಿಯ ಸಿವಿಲ್ ನ್ಯಾಯಧೀಶೆ ಮಹಿಳೆಯನ್ನು ಪ್ರಶ್ನಿಸಲು ಆರಂಭಿಸಿದಾಗ, ಕಣ್ಣೀರಿಡುತ್ತಾ ಮಾತು ಆರಂಭಿಸಿದ ಮಹಿಳೆ, ಹೊಟ್ಟೆಗೆ ತಿನ್ನಲು ಸರಿಯಾದ ವ್ಯವಸ್ಥೆ ಇಲ್ಲ. ಅದಕ್ಕಾಗಿ ಸಣ್ಣ ಕಲಾಕೃತಿಯುಳ್ಳ ಪುಸ್ತಕಗಳನ್ನು ಮಾರಾಟ ಮಾಡುತ್ತಿದ್ದೇನೆ ಎಂದು ಗದ್ಗದಿತವಾಗಿ ಉತ್ತರಿಸುತ್ತಾ ಸುತ್ತಲು ಸೇರಿದ್ದವರ ಸಿಂಪತಿಯನ್ನು ಗಿಟ್ಟಿಸಿಕೊಳ್ಳಲು ಪ್ರಯತ್ನಿಸಿದರು.
ಬೆಳಗ್ಗಿನಿಂದಲೇ ಮಹಿಳೆಯೂ ಇಬ್ಬರು ಮಕ್ಕಳ ಮೂಲಕ ವ್ಯಾಪರ ನಡೆಸುತ್ತಿದ್ದರು ಎಂದು ಸ್ಥಳೀಯರು ದೂರಿದ್ದಾರೆ. ಮಧ್ಯಾಹ್ನ 2.30 ರ ಸುಮಾರಿಗೆ ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ ಅವರು, ಮಹಿಳೆ ನೆರಳಲ್ಲಿ ಕೂತುಕೊಂಡಿದ್ದು, ವಾಹನಗಳು ಓಡಾಡುವ ರಸ್ತೆಯಲ್ಲಿ ಮಕ್ಕಳು ವಾಹನಕ್ಕೆ ಅಡ್ಡವಾಗಿ ಓಡಿ ಬರುತ್ತಾ ವಸ್ತುಗಳನ್ನು ಮಾರಾಟಕ್ಕೆ ಯತ್ನಿಸುತ್ತಿರುವುದನ್ನು ಗಮನಿಸಿ, ಮಹಿಳಾ ಠಾಣೆ, ಮಕ್ಕಳ ರಕ್ಷಣಾ ಘಟಕ ಹಾಗು ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…