ಉಡುಪಿ: ದುಡಿಯುವ ಮಕ್ಕಳಿಗೆ ನ್ಯಾಯಾಧೀಶೆಯ ಮನ ಮಿಡಿದಿದೆ. ಮಧ್ಯಾಹ್ನ ನಗರದ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಹೊರ ರಾಜ್ಯದ ಮಹಿಳೆಯೊಬ್ಬರು ಇಬ್ಬರು ಪುಟಾಣಿ ಮಕ್ಕಳ ಮೂಲಕ ರಸ್ತೆಯಲ್ಲಿ ಕಲಾಕೃತಿಯುಳ್ಳ ಸಣ್ಣ ಪುಸ್ತಕಗಳನ್ನು ಮಾರಾಟ ಮಾಡಿಸುತ್ತಿದ್ದರು.
ಇದನ್ನು ಗಮನಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ.ಎಸ್ ತಕ್ಷಣ ಪೋಲಿಸರಿಗೆ ಮಾಹಿತಿ ನೀಡಿ, ಮಕ್ಕಳನ್ನು ರಕ್ಷಿಸಿದ್ದಾರೆ. ಹಿರಿಯ ಸಿವಿಲ್ ನ್ಯಾಯಧೀಶೆ ಮಹಿಳೆಯನ್ನು ಪ್ರಶ್ನಿಸಲು ಆರಂಭಿಸಿದಾಗ, ಕಣ್ಣೀರಿಡುತ್ತಾ ಮಾತು ಆರಂಭಿಸಿದ ಮಹಿಳೆ, ಹೊಟ್ಟೆಗೆ ತಿನ್ನಲು ಸರಿಯಾದ ವ್ಯವಸ್ಥೆ ಇಲ್ಲ. ಅದಕ್ಕಾಗಿ ಸಣ್ಣ ಕಲಾಕೃತಿಯುಳ್ಳ ಪುಸ್ತಕಗಳನ್ನು ಮಾರಾಟ ಮಾಡುತ್ತಿದ್ದೇನೆ ಎಂದು ಗದ್ಗದಿತವಾಗಿ ಉತ್ತರಿಸುತ್ತಾ ಸುತ್ತಲು ಸೇರಿದ್ದವರ ಸಿಂಪತಿಯನ್ನು ಗಿಟ್ಟಿಸಿಕೊಳ್ಳಲು ಪ್ರಯತ್ನಿಸಿದರು.
ಬೆಳಗ್ಗಿನಿಂದಲೇ ಮಹಿಳೆಯೂ ಇಬ್ಬರು ಮಕ್ಕಳ ಮೂಲಕ ವ್ಯಾಪರ ನಡೆಸುತ್ತಿದ್ದರು ಎಂದು ಸ್ಥಳೀಯರು ದೂರಿದ್ದಾರೆ. ಮಧ್ಯಾಹ್ನ 2.30 ರ ಸುಮಾರಿಗೆ ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ ಅವರು, ಮಹಿಳೆ ನೆರಳಲ್ಲಿ ಕೂತುಕೊಂಡಿದ್ದು, ವಾಹನಗಳು ಓಡಾಡುವ ರಸ್ತೆಯಲ್ಲಿ ಮಕ್ಕಳು ವಾಹನಕ್ಕೆ ಅಡ್ಡವಾಗಿ ಓಡಿ ಬರುತ್ತಾ ವಸ್ತುಗಳನ್ನು ಮಾರಾಟಕ್ಕೆ ಯತ್ನಿಸುತ್ತಿರುವುದನ್ನು ಗಮನಿಸಿ, ಮಹಿಳಾ ಠಾಣೆ, ಮಕ್ಕಳ ರಕ್ಷಣಾ ಘಟಕ ಹಾಗು ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…