ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆ:- ಜಾನಪದ ಸಂಭ್ರಮ, ಸದಸ್ಯರ ಪದಗ್ರಹಣ, ಗಣ್ಯರ ಉಪಸ್ಥಿತಿಯಲ್ಲಿ ಸಮಾಜ ಮಂದಿರದಲ್ಲಿ ಅನಾವರಣ, ನಡೆಯಿತು ಗೌರವ ಸನ್ಮಾನ, ಯಶಸ್ವಿ ಎನಿಸಿತು ಕಾರ್ಯಕ್ರಮ

ದಕ್ಷಿಣ ಕನ್ನಡ : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲೆಯ ಘಟಕದ ಉಸ್ತುವಾರಿಯಲ್ಲಿ , ಮೂಡಬಿದ್ರೆ ತಾಲೂಕು ಘಟಕದ ನೂತನ ಸದಸ್ಯರ ಪದಗ್ರಹಣ ಸಮಾರಂಭ ಮತ್ತು ಜಾನಪದ ಸಂಭ್ರಮ ಮತ್ತು ಕೆಡ್ಡಸ ಆಚರಣೆ ಕಾರ್ಯಕ್ರಮವು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆಯಿತು.


ಜಾನಪದ ಪರಿಷತ್ತು ಮೂಡಬಿದ್ರೆ ತಾಲೂಕು ಘಟಕ,ತುಳುಕೂಟ ಮೂಡಬಿದರೆ, ತುಳು ವರ್ಲ್ಡ್ ಮಂಗಳೂರು, ಇದರ ಸಂಯುಕ್ತ ಆಶ್ರಯದಲ್ಲಿ “ತುಳುನಾಡ ಕೆಡ್ಡಸ ಆಚರಣೆ” ಹಾಗೂ “ಜಾನಪದ ಸಂಭ್ರಮ” ಮತ್ತು ನೂತನ ಸದಸ್ಯರ ಪದಗ್ರಹಣ ಸಮಾರಂಭ , ತುಳುನಾಡ ಕೆಡ್ಡಸ ಆಚರಣೆ ಪ್ರಾತ್ಯಕ್ಷಿಕೆಯನ್ನು ಶ್ರೀನಿವಾಸ ಆಳ್ವ, ಕಳತ್ತೂರು, ರಾಜೇಶ್ ಆಳ್ವರ ಸಹಕಾರದೊಂದಿಗೆ ಜನರಿಗೆ ಮನಮುಟ್ಟುವಂತೆ ವಿವರಿಸಿದರು ತುಳು ಸಾಹಿತಿ ಉಗ್ಗಪ್ಪ ಪೂಜಾರಿಯವರು ತಾನು ಬರೆದ ಜಾನಪದ ಪಾಡ್ಡನ ಸೊಗಸಾಗಿ ಹಾಡಿ ವಿವರಣೆ ನೀಡಿದರು.
ಜಾನಪದ ಸಂಭ್ರಮದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ ಭೂಷಣ ಡಾಕ್ಟರ್ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಜೈನ ಮಠ ಮೂಡಬಿದ್ರೆ ಇವರು ನೆರವೇರಿಸಿ ಶುಭಾಶಿರ್ವಾದ ಮಾತುಗಳ ನುಡಿದರು.


ಸಭಾಧ್ಯಕ್ಷತೆಯನ್ನು ಪದ್ಮಶ್ರೀ ಭಟ್ ಅಧ್ಯಕ್ಷರು ಕರ್ನಾಟಕ ಜಾನಪದ ಪರಿಷತ್ತು ಮೂಡಬಿದ್ರೆ ತಾಲೂಕು ಘಟಕ, ಇವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ , ಅಧ್ಯಕ್ಷರು ಜಾನಪದ ಪರಿಷತ್ ದಕ್ಷಿಣ ಕನ್ನಡ,,, ಧನ ಕೀರ್ತಿ ಬಲಿಪ, ಡಾಕ್ಟರ್ ರಾಜೇಶ ಆಳ್ವ, ಚಂದ್ರಹಾಸ ದೇವಾಡಿಗ, ಡಾಕ್ಟರ್ ರಾಜೇಶ್ ಭಟ್ ಮಂದಾರ, ರಾಜೇಶ್ ಸ್ಕೈಲಾರ್ಕ್, ಮೋಹನದಾಸ ರೈ ಇವರು ಗೌರವ ಉಪಸ್ಥಿತರಿದ್ದರು ಹಾಗೂ ಸಭಾ ಕಾರ್ಯಕ್ರಮದ ನಿರ್ವಹಣೆಯನ್ನು ಚೇತನ ರಾಜೇಂದ್ರ ಹೆಗ್ಡೆ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಮಂದಾರ ರಾಜೇಶ್ ಭಟ್, ಅಗರಿ ರಾಘವೇಂದ್ರ ರಾವ್, ಅರುಣ್ ಅಜೆಕಾರ್, ಉಗಪ್ಪ ಪೂಜಾರಿ ಇವರನ್ನು ಸನ್ಮಾನಿಸಲಾಯಿತು.


ನೂತನ ಸದಸ್ಯರೆಲ್ಲರಿಗೂ ಜಾನಪದ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಗುರುತಿನ ಚೀಟಿ ಅಧಿಕೃತಗೊಳಿಸಿದರು.
ವಾಯ್ಸ್ ಆಫ್ ಆರಾಧನಾ ತಂಡದ ಮಕ್ಕಳಿಂದ ಜಾನಪದ ಸಂಭ್ರಮ ಅತ್ಯುತ್ತಮವಾಗಿ ಮೂಡಿ ಬಂತು
ಮಂದಾರ ರಾಜೇಶ್ ಭಟ್ಟರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!