ಪುತ್ತೂರು: ಸಂವಿಧಾನವನ್ನು ಉಳಿಸಿ ಕಾಪಾಡಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಸಂವಿಧಾನದ ಆಶಯದಂತೆ ನಮ್ಮ ಹಕ್ಕುಗಳನ್ನು ಅರಿತು ಬದುಕುವುದರೊಂದಿಗೆ ಸಮನ್ವಯತೆಯಲ್ಲಿ ಸಾಗುವುದು ಸಂವಿಧಾನಕ್ಕೆ ನೀಡುವ ಗೌರವವಾಗಿದೆ ಎಂದು ಪುತ್ತೂರು ತಹಸೀಲ್ದಾರ್ ಪುರಂದರ ತಿಳಿಸಿದರು.
ಅವರು ದ.ಕ.ಜಿಲ್ಲಾ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಇವುಗಳ ಆಶ್ರಯದಲ್ಲಿ ಸೋಮವಾರ ಪುತ್ತೂರು ನಗರದಲ್ಲಿ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದಿAದ ನಾವು ಸ್ವತಂತ್ರ ಬದುಕು ಕಂಡುಕೊಳ್ಳಲು ಸಾಧ್ಯವಾಗಿದೆ. ನಮ್ಮ ಹಕ್ಕುಗಳು ಮತ್ತು ಕರ್ತವ್ಯಗಳ ಪರಿಪಾಲನೆ, ಆಡಳಿತದ ರೂಪುರೇಷೆಗಳು ಸಂವಿಧಾನದಲ್ಲಿ ಅಡಕವಾಗಿದೆ. ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಪರಿಪಾಲನೆಗೆ ಚ್ಯುತಿಯಾಗದಂತೆ ಸಂವಿಧಾನವು ನಮಗೆ ರಕ್ಷಣೆಯನ್ನು ನೀಡಿ ಪರಿಹಾರವನ್ನು ಕಂಡುಕೊಳ್ಳುವAತೆ ಮಾಡುತ್ತದೆ. ಸಂವಿಧಾನದ ಮೂಲಕವೇ ನಮ್ಮ ಜೀವನವಿದೆ. ಎಲ್ಲಾ ನಾಗರಿಕರನ್ನು ಮುಖ್ಯವಾಹಿನಿಗೆ ತರುವುದು ಸಂವಿಧಾನದ ಆಶಯವಾಗಿದೆ. ನಮ್ಮ ಸಂವಿಧಾವು ಪವಿತ್ರ ಮತ್ತು ಬಲಿಷ್ಠವಾಗಿದೆ. ಸಂವಿಧಾನವನ್ನು ನಮಗೆ ನಾವು ಅರ್ಪಿಸಿಕೊಂಡು ೭೫ ವರ್ಷಗಳು ಸಂದಿವೆ. ಅದನ್ನು ಮತ್ತೊಮ್ಮೆ ನೆನಪಿಸಿಕೊಳ್ಳುವುದು ಸಂವಿಧಾನ ಜಾಗೃತಿ ಜಾಥಾದ ಮುಖ್ಯ ಉದ್ದೇಶವಾಗಿದೆ ಎಂದರು.
ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮ ಪಂಚಾಯತ್ನಿAದ ಪುತ್ತೂರು ನಗರಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ವಾಹನವನ್ನು ಪರ್ಲಡ್ಕದಲ್ಲಿ ನಗರಕ್ಕೆ ಸ್ವಾಗತಿಸಲಾಯಿತು. ಬಳಿಕ ವಾದ್ಯಗೋಷ್ಟಿಗಳೊಂದಿಗೆ, ಶಾಲಾ ವಿದ್ಯಾರ್ಥಿಗಳ ಕಾಲ್ನಡಿಗೆ ಜಾಥಾ, ಬೈಕ್ ರ್ಯಾಲಿಗಳೊಂದಿಗೆ ಸಭಾ ಕಾರ್ಯಕ್ರಮ ನಡೆದ ಪುತ್ತೂರಿನ ಕಿಲ್ಲೆ ಮೈದಾನದ ಸಮೀಪದಲ್ಲಿರುವ ಶಾಸಕರ ಕಚೇರಿಗೆ ಆವರಣಕ್ಕೆ ತರಲಾಯಿತು. ಅಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಸಿ.ಎಂ ಅವರು ಸಂವಿಧಾನ ಪೀಠಿಕೆಯ ಪ್ರತಿಜ್ಞೆಯನ್ನು ಬೋಧಿಸಿದರು.
ಜಾಥಾದ ವಾಹನದಲ್ಲಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಹಾರಾರ್ಪಣೆ ಮಾಡಿದರು. ಜಾಥಾದಲ್ಲಿ ಸಂವಿಧಾನ ಪಠಣ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಸಭೆಯ ಪೌರಾಯುಕ್ತ ಮಧು ಎಸ್ ಮನೋಹರ್,ಶಿಕ್ಷಣಾಧಿಕಾರಿ ಲೋಕೇಶ್ ಯಸ್, ಆರ್., ಕಾರ್ಯನಿರ್ವಾಹಣಧಿಕಾರಿ ನವೀನ್ ಭ0ಡಾರಿ, ವಿವಿಧ ಇಲಾಖೆಯ ಅಧಿಕಾರಿಗಳು,ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು,ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…