ದಕ್ಷಿಣ ಕನ್ನಡ :- ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರ ಮೇಲುಸ್ತುವಾರಿಯಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ದಿನಾಂಕ 15.2.2024 ರಂದು ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆ ತಾಲೂಕು ಸೌಧ ಇಲ್ಲಿನ ತಾಲೂಕು ಕಚೇರಿಯಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ”ಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಬರುವ ದೂರುಗಳನ್ನು ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಸ್ವೀಕರಿಸಲಾಗುವುದು ಮತ್ತು ಸರ್ಕಾರಿ ಕೆಲಸಗಳಲ್ಲಿ ವಿಳಂಬ ನೀತಿ ಹಾಗೂ ಇತರ ತೊಂದರೆಗಳು ಸೇರಿದಂತೆ ಸರ್ಕಾರಿ ನೌಕರರ ವಿರುದ್ಧ ಸಾರ್ವಜನಿಕರ ದೂರುಗಳಿದ್ದಲ್ಲಿ ಸಾರ್ವಜನಿಕರು ಅಂದು ನೀಡಬಹುದಾಗಿದ್ದು,
ಜನಸಂಪರ್ಕ ಸಭೆಯನ್ನ ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಮೂನೆ ಒಂದು ಮತ್ತು ಎರಡರಲ್ಲಿ ಸರಿಯಾದ ರೀತಿಯಲ್ಲಿ ಭರ್ತಿ ಮಾಡಿದ ದೂರು ಅರ್ಜಿಗಳನ್ನ ಅಫಿದವಿತ್ ಮಾಡಿಸಿ ಜನಸಂಪರ್ಕ ಸಭೆಯಲ್ಲಿ ಸಲ್ಲಿಸಬಹುದಾಗಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.



