ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ : ಕರಾಟೆ ಮೂಲಕ ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಸುಧಾರಣೆ – ಈಶ್ವರ್ ಕಟೀಲ್

ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್, ಶಿಮಂತೂರಿನ ವಿದ್ಯಾರ್ಥಿಗಳಿಗೆ ಕಳೆದ ಜೂನ್ ತಿಂಗಳಲ್ಲಿ ಪ್ರಾರಂಭಗೊಂಡ ಉಚಿತ ಕರಾಟೆ ತರಗತಿಯು ಮುಕ್ತಾಯಗೊಂಡಿದ್ದು ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ಗ್ರೇಡಿಂಗ್ ಪರೀಕ್ಷೆಯನ್ನು ಆಯೋಜಿಸಲಾಯಿತು.


ಕರಾಟೆ ತರಬೇತಿಯಲ್ಲಿ ಹಲವಾರು ವರ್ಷಗಳ ಅಪಾರ ಅನುಭವ ಹೊಂದಿರುವ ಕರಾಟೆ ಮಾಸ್ಟರ್. ಕ್ಯೋಷಿ.ಈಶ್ವರ್ ಕಟೀಲ್ ಮುಖ್ಯ ಪರಿವೀಕ್ಷಕರಾಗಿ ಪರೀಕ್ಷೆಯನ್ನು ನಡೆಸಿ, ಭಾರತವು ಕರಾಟೆಯನ್ನು ಸಮರ ವಿಜ್ಞಾನವಾಗಿ ಕಲಿಸುತ್ತದೆ, ಅಲ್ಲಿ ಕರಾಟೆ ಪರಿಕಲ್ಪನೆಗಳು ವಿಜ್ಞಾನ ಮತ್ತು ಗಣಿತದ ಮೂಲಭೂತ ಅಂಶಗಳಿಗೆ ಸಂಬಂಧಿಸಿರಬಹುದು. ಇವುಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ  ಎಂದು ಹೇಳಿದರು.ಇವರೊಂದಿಗೆ. ಶಿಹಾನ್ ಮೋರ್ಗನ್ ವಿಲಿಯಮ್, ರೆಂಷಿ ಚಂದ್ರಹಾಸ್ ಕಟೀಲ್,ಸೆನ್ಸ್ಯಿ ಸುಮಂತ್, ಸೀನಿಯರ್ ಬ್ಲಾಕ್‌ಬೆಲ್ಟ್ ಪರಿಣಿತರು ಸಹಾಯಕರಾಗಿ ಕಾರ್ಯನಿರ್ವಹಿಸಿದರು.

ಈ ಪರೀಕ್ಷೆಯಲ್ಲಿ ಸುಮಾರು 130 ವಿದ್ಯಾರ್ಥಿಗಳು ಭಾಗವಹಿಸಿದ್ದು ಮುಂದಿನ ಹಂತಕ್ಕೆ ಉತ್ತೀರ್ಣರಾಗಿರುತ್ತಾರೆ. ಈ ಪೈಕಿ 33 ವಿದ್ಯಾರ್ಥಿಗಳಿಗೆ ಹಳದಿ, 36 ವಿದ್ಯಾರ್ಥಿಗಳಿಗೆ ಹಸಿರು, 26 ವಿದ್ಯಾರ್ಥಿಗಳಿಗೆ ಕೇಸರಿ, 30 ವಿದ್ಯಾರ್ಥಿಗಳಿಗೆ ನೀಲಿ, 5 ವಿದ್ಯಾರ್ಥಿಗಳಿಗೆ ನೇರಳೆ ಬಣ್ಣದ ಬೆಲ್ಟ್ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ , ಶಾಲಾ ಕರಾಟೆ ತರಬೇತುದಾರರಾದ ಶಿಹಾನ್ ನಾಗರಾಜ್ ಕುಲಾಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!