ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್, ಶಿಮಂತೂರಿನ ವಿದ್ಯಾರ್ಥಿಗಳಿಗೆ ಕಳೆದ ಜೂನ್ ತಿಂಗಳಲ್ಲಿ ಪ್ರಾರಂಭಗೊಂಡ ಉಚಿತ ಕರಾಟೆ ತರಗತಿಯು ಮುಕ್ತಾಯಗೊಂಡಿದ್ದು ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ಗ್ರೇಡಿಂಗ್ ಪರೀಕ್ಷೆಯನ್ನು ಆಯೋಜಿಸಲಾಯಿತು.
ಕರಾಟೆ ತರಬೇತಿಯಲ್ಲಿ ಹಲವಾರು ವರ್ಷಗಳ ಅಪಾರ ಅನುಭವ ಹೊಂದಿರುವ ಕರಾಟೆ ಮಾಸ್ಟರ್. ಕ್ಯೋಷಿ.ಈಶ್ವರ್ ಕಟೀಲ್ ಮುಖ್ಯ ಪರಿವೀಕ್ಷಕರಾಗಿ ಪರೀಕ್ಷೆಯನ್ನು ನಡೆಸಿ, ಭಾರತವು ಕರಾಟೆಯನ್ನು ಸಮರ ವಿಜ್ಞಾನವಾಗಿ ಕಲಿಸುತ್ತದೆ, ಅಲ್ಲಿ ಕರಾಟೆ ಪರಿಕಲ್ಪನೆಗಳು ವಿಜ್ಞಾನ ಮತ್ತು ಗಣಿತದ ಮೂಲಭೂತ ಅಂಶಗಳಿಗೆ ಸಂಬಂಧಿಸಿರಬಹುದು. ಇವುಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.ಇವರೊಂದಿಗೆ. ಶಿಹಾನ್ ಮೋರ್ಗನ್ ವಿಲಿಯಮ್, ರೆಂಷಿ ಚಂದ್ರಹಾಸ್ ಕಟೀಲ್,ಸೆನ್ಸ್ಯಿ ಸುಮಂತ್, ಸೀನಿಯರ್ ಬ್ಲಾಕ್ಬೆಲ್ಟ್ ಪರಿಣಿತರು ಸಹಾಯಕರಾಗಿ ಕಾರ್ಯನಿರ್ವಹಿಸಿದರು.
ಈ ಪರೀಕ್ಷೆಯಲ್ಲಿ ಸುಮಾರು 130 ವಿದ್ಯಾರ್ಥಿಗಳು ಭಾಗವಹಿಸಿದ್ದು ಮುಂದಿನ ಹಂತಕ್ಕೆ ಉತ್ತೀರ್ಣರಾಗಿರುತ್ತಾರೆ. ಈ ಪೈಕಿ 33 ವಿದ್ಯಾರ್ಥಿಗಳಿಗೆ ಹಳದಿ, 36 ವಿದ್ಯಾರ್ಥಿಗಳಿಗೆ ಹಸಿರು, 26 ವಿದ್ಯಾರ್ಥಿಗಳಿಗೆ ಕೇಸರಿ, 30 ವಿದ್ಯಾರ್ಥಿಗಳಿಗೆ ನೀಲಿ, 5 ವಿದ್ಯಾರ್ಥಿಗಳಿಗೆ ನೇರಳೆ ಬಣ್ಣದ ಬೆಲ್ಟ್ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ , ಶಾಲಾ ಕರಾಟೆ ತರಬೇತುದಾರರಾದ ಶಿಹಾನ್ ನಾಗರಾಜ್ ಕುಲಾಲ್ ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…