ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್, ಶಿಮಂತೂರಿನ ವಿದ್ಯಾರ್ಥಿಗಳಿಗೆ ಕಳೆದ ಜೂನ್ ತಿಂಗಳಲ್ಲಿ ಪ್ರಾರಂಭಗೊಂಡ ಉಚಿತ ಕರಾಟೆ ತರಗತಿಯು ಮುಕ್ತಾಯಗೊಂಡಿದ್ದು ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ಗ್ರೇಡಿಂಗ್ ಪರೀಕ್ಷೆಯನ್ನು ಆಯೋಜಿಸಲಾಯಿತು.
ಕರಾಟೆ ತರಬೇತಿಯಲ್ಲಿ ಹಲವಾರು ವರ್ಷಗಳ ಅಪಾರ ಅನುಭವ ಹೊಂದಿರುವ ಕರಾಟೆ ಮಾಸ್ಟರ್. ಕ್ಯೋಷಿ.ಈಶ್ವರ್ ಕಟೀಲ್ ಮುಖ್ಯ ಪರಿವೀಕ್ಷಕರಾಗಿ ಪರೀಕ್ಷೆಯನ್ನು ನಡೆಸಿ, ಭಾರತವು ಕರಾಟೆಯನ್ನು ಸಮರ ವಿಜ್ಞಾನವಾಗಿ ಕಲಿಸುತ್ತದೆ, ಅಲ್ಲಿ ಕರಾಟೆ ಪರಿಕಲ್ಪನೆಗಳು ವಿಜ್ಞಾನ ಮತ್ತು ಗಣಿತದ ಮೂಲಭೂತ ಅಂಶಗಳಿಗೆ ಸಂಬಂಧಿಸಿರಬಹುದು. ಇವುಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.ಇವರೊಂದಿಗೆ. ಶಿಹಾನ್ ಮೋರ್ಗನ್ ವಿಲಿಯಮ್, ರೆಂಷಿ ಚಂದ್ರಹಾಸ್ ಕಟೀಲ್,ಸೆನ್ಸ್ಯಿ ಸುಮಂತ್, ಸೀನಿಯರ್ ಬ್ಲಾಕ್ಬೆಲ್ಟ್ ಪರಿಣಿತರು ಸಹಾಯಕರಾಗಿ ಕಾರ್ಯನಿರ್ವಹಿಸಿದರು.
ಈ ಪರೀಕ್ಷೆಯಲ್ಲಿ ಸುಮಾರು 130 ವಿದ್ಯಾರ್ಥಿಗಳು ಭಾಗವಹಿಸಿದ್ದು ಮುಂದಿನ ಹಂತಕ್ಕೆ ಉತ್ತೀರ್ಣರಾಗಿರುತ್ತಾರೆ. ಈ ಪೈಕಿ 33 ವಿದ್ಯಾರ್ಥಿಗಳಿಗೆ ಹಳದಿ, 36 ವಿದ್ಯಾರ್ಥಿಗಳಿಗೆ ಹಸಿರು, 26 ವಿದ್ಯಾರ್ಥಿಗಳಿಗೆ ಕೇಸರಿ, 30 ವಿದ್ಯಾರ್ಥಿಗಳಿಗೆ ನೀಲಿ, 5 ವಿದ್ಯಾರ್ಥಿಗಳಿಗೆ ನೇರಳೆ ಬಣ್ಣದ ಬೆಲ್ಟ್ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ , ಶಾಲಾ ಕರಾಟೆ ತರಬೇತುದಾರರಾದ ಶಿಹಾನ್ ನಾಗರಾಜ್ ಕುಲಾಲ್ ಉಪಸ್ಥಿತರಿದ್ದರು.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…