ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ; ಯುವ ಜನಾಂಗ ಸನ್ಮಾರ್ಗದಲ್ಲಿ ನಡೆದರೆ ಮಾತ್ರ ಸಾಧಕರಾಗಲು ಸಾಧ್ಯ-ಪಂಜ ಭಾಸ್ಕರ ಭಟ್

ಮುಲ್ಕಿ: ಶಿಕ್ಷಣದ ಜೊತೆಗೆ ಸಾಮಾಜಿಕ ಚಟುವಟಿಕೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಯುವ ಜನಾಂಗ ಸನ್ಮಾರ್ಗದಲ್ಲಿ ನಡೆದರೆ ಸಾಧಕರಾಗಲು ಸಾಧ್ಯ ಎಂದು ಮಾಜೀ ಧಾರ್ಮಿಕ ಪರಿಷತ್ ಸದಸ್ಯ ವೇ.ಮೂ. ಪಂಜ ಭಾಸ್ಕರ ಭಟ್ ಹೇಳಿದರು.

ಅವರು ಪಕ್ಷಿಕೆರೆ ಸಮೀಪದ ಪಂಜ ಹರಿಪಾದೆ ಶ್ರೀ ಜಾರಂತಾಯ ದೈವಸ್ಥಾನದ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಅಶಕ್ತ ಕುಟುಂಬಗಳಿಗೆ ನೀಡಿ ಮಾತನಾಡಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ನಲ್ಯಗುತ್ತು ಪ್ರಕಾಶ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಸವಲತ್ತುಗಳನ್ನು ಉಪಯೋಗಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಸಾಧಕರಾಗಿ ರಾಷ್ಟ್ರಕ್ಕೆ ಮಾದರಿಯಾಗಿ ಎಂದರು
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಂಜದಗುತ್ತು, ವಿಶ್ವನಾಥ ಶೆಟ್ಟಿ, ದಾಮೋದರ ಶೆಟ್ಟಿ ನಲ್ಯಗುತ್ತು , ಅಶ್ವಿನ್ ಶೆಟ್ಟಿ, ಕುಡುಂಬೂರು, ಶಿವಾಜಿ ಶೆಟ್ಟಿ ನಲ್ಯಗುತ್ತು ಮುಂಬೈ,ಉಮೇಶ್ ಪಂಜ, ಭಾಸ್ಕರ ಶೆಟ್ಟಿ ಹೊಸಮನೆ, ದಿವಾಕರ ಶೆಟ್ಟಿ ನಲ್ಯಗುತ್ತು, ನವೀನ್ ಕುಮಾರ್ ಹರಿಪಾದೆ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಳೆದ ಹಲವಾರು ವರ್ಷಗಳಿಂದ ದೈವದ ಸೇವೆ ಸಲ್ಲಿಸುತ್ತಿರುವ ಉಮೇಶ್ ಪೂಜಾರಿ ಏಳಿಂಜೆ ಹಾಗೂ ಕುಟ್ಟಿ ಪೂಜಾರಿ ರವರನ್ನು ಗೌರವಿಸಲಾಯಿತು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧಕರಿಗೆ ಪ್ರತಿಭಾ ಪುರಸ್ಕಾರ ಅಶಕ್ತರಿಗೆ ಸಹಾಯ ಹಸ್ತ ನೀಡಲಾಯಿತು. ಉಮೇಶ್ ಪಂಜ ನಿರೂಪಿಸಿದರು

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!