ಮುಲ್ಕಿ: ಶಿಕ್ಷಣದ ಜೊತೆಗೆ ಸಾಮಾಜಿಕ ಚಟುವಟಿಕೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಯುವ ಜನಾಂಗ ಸನ್ಮಾರ್ಗದಲ್ಲಿ ನಡೆದರೆ ಸಾಧಕರಾಗಲು ಸಾಧ್ಯ ಎಂದು ಮಾಜೀ ಧಾರ್ಮಿಕ ಪರಿಷತ್ ಸದಸ್ಯ ವೇ.ಮೂ. ಪಂಜ ಭಾಸ್ಕರ ಭಟ್ ಹೇಳಿದರು.
ಅವರು ಪಕ್ಷಿಕೆರೆ ಸಮೀಪದ ಪಂಜ ಹರಿಪಾದೆ ಶ್ರೀ ಜಾರಂತಾಯ ದೈವಸ್ಥಾನದ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಅಶಕ್ತ ಕುಟುಂಬಗಳಿಗೆ ನೀಡಿ ಮಾತನಾಡಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ನಲ್ಯಗುತ್ತು ಪ್ರಕಾಶ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಸವಲತ್ತುಗಳನ್ನು ಉಪಯೋಗಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಸಾಧಕರಾಗಿ ರಾಷ್ಟ್ರಕ್ಕೆ ಮಾದರಿಯಾಗಿ ಎಂದರು
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಂಜದಗುತ್ತು, ವಿಶ್ವನಾಥ ಶೆಟ್ಟಿ, ದಾಮೋದರ ಶೆಟ್ಟಿ ನಲ್ಯಗುತ್ತು , ಅಶ್ವಿನ್ ಶೆಟ್ಟಿ, ಕುಡುಂಬೂರು, ಶಿವಾಜಿ ಶೆಟ್ಟಿ ನಲ್ಯಗುತ್ತು ಮುಂಬೈ,ಉಮೇಶ್ ಪಂಜ, ಭಾಸ್ಕರ ಶೆಟ್ಟಿ ಹೊಸಮನೆ, ದಿವಾಕರ ಶೆಟ್ಟಿ ನಲ್ಯಗುತ್ತು, ನವೀನ್ ಕುಮಾರ್ ಹರಿಪಾದೆ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಳೆದ ಹಲವಾರು ವರ್ಷಗಳಿಂದ ದೈವದ ಸೇವೆ ಸಲ್ಲಿಸುತ್ತಿರುವ ಉಮೇಶ್ ಪೂಜಾರಿ ಏಳಿಂಜೆ ಹಾಗೂ ಕುಟ್ಟಿ ಪೂಜಾರಿ ರವರನ್ನು ಗೌರವಿಸಲಾಯಿತು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧಕರಿಗೆ ಪ್ರತಿಭಾ ಪುರಸ್ಕಾರ ಅಶಕ್ತರಿಗೆ ಸಹಾಯ ಹಸ್ತ ನೀಡಲಾಯಿತು. ಉಮೇಶ್ ಪಂಜ ನಿರೂಪಿಸಿದರು
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…