ಮುಲ್ಕಿ: ಶಿಕ್ಷಣದ ಜೊತೆಗೆ ಸಾಮಾಜಿಕ ಚಟುವಟಿಕೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಯುವ ಜನಾಂಗ ಸನ್ಮಾರ್ಗದಲ್ಲಿ ನಡೆದರೆ ಸಾಧಕರಾಗಲು ಸಾಧ್ಯ ಎಂದು ಮಾಜೀ ಧಾರ್ಮಿಕ ಪರಿಷತ್ ಸದಸ್ಯ ವೇ.ಮೂ. ಪಂಜ ಭಾಸ್ಕರ ಭಟ್ ಹೇಳಿದರು.
ಅವರು ಪಕ್ಷಿಕೆರೆ ಸಮೀಪದ ಪಂಜ ಹರಿಪಾದೆ ಶ್ರೀ ಜಾರಂತಾಯ ದೈವಸ್ಥಾನದ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಅಶಕ್ತ ಕುಟುಂಬಗಳಿಗೆ ನೀಡಿ ಮಾತನಾಡಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ನಲ್ಯಗುತ್ತು ಪ್ರಕಾಶ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಸವಲತ್ತುಗಳನ್ನು ಉಪಯೋಗಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಸಾಧಕರಾಗಿ ರಾಷ್ಟ್ರಕ್ಕೆ ಮಾದರಿಯಾಗಿ ಎಂದರು
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಂಜದಗುತ್ತು, ವಿಶ್ವನಾಥ ಶೆಟ್ಟಿ, ದಾಮೋದರ ಶೆಟ್ಟಿ ನಲ್ಯಗುತ್ತು , ಅಶ್ವಿನ್ ಶೆಟ್ಟಿ, ಕುಡುಂಬೂರು, ಶಿವಾಜಿ ಶೆಟ್ಟಿ ನಲ್ಯಗುತ್ತು ಮುಂಬೈ,ಉಮೇಶ್ ಪಂಜ, ಭಾಸ್ಕರ ಶೆಟ್ಟಿ ಹೊಸಮನೆ, ದಿವಾಕರ ಶೆಟ್ಟಿ ನಲ್ಯಗುತ್ತು, ನವೀನ್ ಕುಮಾರ್ ಹರಿಪಾದೆ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಳೆದ ಹಲವಾರು ವರ್ಷಗಳಿಂದ ದೈವದ ಸೇವೆ ಸಲ್ಲಿಸುತ್ತಿರುವ ಉಮೇಶ್ ಪೂಜಾರಿ ಏಳಿಂಜೆ ಹಾಗೂ ಕುಟ್ಟಿ ಪೂಜಾರಿ ರವರನ್ನು ಗೌರವಿಸಲಾಯಿತು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧಕರಿಗೆ ಪ್ರತಿಭಾ ಪುರಸ್ಕಾರ ಅಶಕ್ತರಿಗೆ ಸಹಾಯ ಹಸ್ತ ನೀಡಲಾಯಿತು. ಉಮೇಶ್ ಪಂಜ ನಿರೂಪಿಸಿದರು
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…