ಮುಲ್ಕಿ: ಶಿಕ್ಷಣದ ಜೊತೆಗೆ ಸಾಮಾಜಿಕ ಚಟುವಟಿಕೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಯುವ ಜನಾಂಗ ಸನ್ಮಾರ್ಗದಲ್ಲಿ ನಡೆದರೆ ಸಾಧಕರಾಗಲು ಸಾಧ್ಯ ಎಂದು ಮಾಜೀ ಧಾರ್ಮಿಕ ಪರಿಷತ್ ಸದಸ್ಯ ವೇ.ಮೂ. ಪಂಜ ಭಾಸ್ಕರ ಭಟ್ ಹೇಳಿದರು.
ಅವರು ಪಕ್ಷಿಕೆರೆ ಸಮೀಪದ ಪಂಜ ಹರಿಪಾದೆ ಶ್ರೀ ಜಾರಂತಾಯ ದೈವಸ್ಥಾನದ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಅಶಕ್ತ ಕುಟುಂಬಗಳಿಗೆ ನೀಡಿ ಮಾತನಾಡಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ನಲ್ಯಗುತ್ತು ಪ್ರಕಾಶ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಸವಲತ್ತುಗಳನ್ನು ಉಪಯೋಗಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಸಾಧಕರಾಗಿ ರಾಷ್ಟ್ರಕ್ಕೆ ಮಾದರಿಯಾಗಿ ಎಂದರು
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಂಜದಗುತ್ತು, ವಿಶ್ವನಾಥ ಶೆಟ್ಟಿ, ದಾಮೋದರ ಶೆಟ್ಟಿ ನಲ್ಯಗುತ್ತು , ಅಶ್ವಿನ್ ಶೆಟ್ಟಿ, ಕುಡುಂಬೂರು, ಶಿವಾಜಿ ಶೆಟ್ಟಿ ನಲ್ಯಗುತ್ತು ಮುಂಬೈ,ಉಮೇಶ್ ಪಂಜ, ಭಾಸ್ಕರ ಶೆಟ್ಟಿ ಹೊಸಮನೆ, ದಿವಾಕರ ಶೆಟ್ಟಿ ನಲ್ಯಗುತ್ತು, ನವೀನ್ ಕುಮಾರ್ ಹರಿಪಾದೆ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಳೆದ ಹಲವಾರು ವರ್ಷಗಳಿಂದ ದೈವದ ಸೇವೆ ಸಲ್ಲಿಸುತ್ತಿರುವ ಉಮೇಶ್ ಪೂಜಾರಿ ಏಳಿಂಜೆ ಹಾಗೂ ಕುಟ್ಟಿ ಪೂಜಾರಿ ರವರನ್ನು ಗೌರವಿಸಲಾಯಿತು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧಕರಿಗೆ ಪ್ರತಿಭಾ ಪುರಸ್ಕಾರ ಅಶಕ್ತರಿಗೆ ಸಹಾಯ ಹಸ್ತ ನೀಡಲಾಯಿತು. ಉಮೇಶ್ ಪಂಜ ನಿರೂಪಿಸಿದರು
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…