ಶಿವಮೊಗ್ಗ : ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವುದು ಸೇರಿದಂತೆ 12 ಬೇಡಿಕೆಗಳನ್ನು ಇಟ್ಟುಕೊಂಡು ರೈತ ಸಂಘಟನೆಗಳು ಹಮ್ಮಿಕೊಂಡಿರುವ ‘ದಿಲ್ಲಿ ಚಲೋ’ ಹೋರಾಟಕ್ಕೆ ಆಗಮಿಸುವ ಅನ್ನದಾತನ ಹಾದಿಗೆ ಮುಳ್ಳುತಂತಿ, ಮೊಳೆಗಳ ಪಟ್ಟಿ, ಸಿಮೆಂಟ್ ಇಟ್ಟಿಗೆ ಇರಿಸಿದ ಕೇಂದ್ರ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುವುದಾಗಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ವಕ್ತಾರ ಎಂ.ರಮೇಶ್ ಶೆಟ್ಟಿಯವರು ತಿಳಿಸಿದ್ದಾರೆ.
ಅವರು ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ, ದೆಹಲಿಯ ಗಡಿಭಾಗಗಳಿಗೆ ಬೇಲಿ ಹಾಕಿ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಕೇಂದ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸದೇ ಬಂಧಿಸಿ, ಬೆದರಿಸಿ ದೇಶದ ಬೆನ್ನುಲಬಾಗಿರುವ ರೈತರನ್ನು ಬಗ್ಗು ಬಡಿಯಬಹುದೆಂದು ತಿಳಿದಿದ್ದರೆ ಅದು ಅವರ ಭ್ರಮೆ. ನಾವು ಖರೀದಿಸುವ ಟಿವಿ, ಮೊಬೈಲ್, ವಾಷಿಂಗ್ ಮಿಷನ್, ಪೇಸ್ಟ್, ಕೂಲ್ ಡ್ರಿಂಕ್ಸ್ ಗಳಿಗೆ ಇಂತಿಷ್ಷೇ ಎಂದು ಬೆಲೆ ಎಂದು ನಿಗದಿ ಮಾಡಲಾಗುತ್ತದೆ. ಅದೇ ಪ್ರತಿಯೊಬ್ಬ ವ್ಯಕ್ತಿ ಜೀವಿಸಲು ಬೇಕಾಗಿರುವ ಅನ್ನ ನೀಡುವ ರೈತರ ಬೆಳೆಗಳಿಗೆ ಕನಿಷ್ಠ ಬೆಲೆ ನಿಗದಿ ಪಡಿಸಿ ಎಂದು ಕೇಳುವ ಹಕ್ಕು ನಮ್ಮ ದೇಶದ ರೈತರಿಗಿದೆ ಎಂದರು.
ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಬಹುದಿನಗಳ ಬೇಡಿಕೆಯಾದ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ ನೀಡುವುದಾಗಿ ಘೋಷಣೆ ಮಾಡಿದ್ದಾರಲ್ಲದೇ, ಸ್ವಾಮೀನಾಥನ್ ವರದಿಯನ್ನು ಜಾರಿಗೆ ತರುವ ಕಿಸಾನ್ ಗ್ಯಾರಂಟಿ ಘೋಷಿಸಿದ್ದಾರೆ. ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಕೇಂದ್ರದಲ್ಲಿ ಐಎನ್ ಡಿಐಎ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಮೊದಲ ದಿನವೇ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡಲಾಗುವುದೆಂದು ತಿಳಿಸಿದ್ದಾರೆ ಎಂದ ರಮೇಶ್ ಇವರು ರೈತರ ಹೋರಾಟಕ್ಕೆ ಈಗಾಗಲೇ ನಮ್ಮ ಪಕ್ಷ ಹಾಗೂ ನಾಯಕರುಗಳು ಸಂಪೂರ್ಣ ಬೆಂಬಲ ಘೋಷಣೆ ಮಾಡಿದ್ದಾರೆಂದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…