ಶಿವಮೊಗ್ಗ : ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವುದು ಸೇರಿದಂತೆ 12 ಬೇಡಿಕೆಗಳನ್ನು ಇಟ್ಟುಕೊಂಡು ರೈತ ಸಂಘಟನೆಗಳು ಹಮ್ಮಿಕೊಂಡಿರುವ ‘ದಿಲ್ಲಿ ಚಲೋ’ ಹೋರಾಟಕ್ಕೆ ಆಗಮಿಸುವ ಅನ್ನದಾತನ ಹಾದಿಗೆ ಮುಳ್ಳುತಂತಿ, ಮೊಳೆಗಳ ಪಟ್ಟಿ, ಸಿಮೆಂಟ್ ಇಟ್ಟಿಗೆ ಇರಿಸಿದ ಕೇಂದ್ರ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುವುದಾಗಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ವಕ್ತಾರ ಎಂ.ರಮೇಶ್ ಶೆಟ್ಟಿಯವರು ತಿಳಿಸಿದ್ದಾರೆ.
ಅವರು ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ, ದೆಹಲಿಯ ಗಡಿಭಾಗಗಳಿಗೆ ಬೇಲಿ ಹಾಕಿ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಕೇಂದ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸದೇ ಬಂಧಿಸಿ, ಬೆದರಿಸಿ ದೇಶದ ಬೆನ್ನುಲಬಾಗಿರುವ ರೈತರನ್ನು ಬಗ್ಗು ಬಡಿಯಬಹುದೆಂದು ತಿಳಿದಿದ್ದರೆ ಅದು ಅವರ ಭ್ರಮೆ. ನಾವು ಖರೀದಿಸುವ ಟಿವಿ, ಮೊಬೈಲ್, ವಾಷಿಂಗ್ ಮಿಷನ್, ಪೇಸ್ಟ್, ಕೂಲ್ ಡ್ರಿಂಕ್ಸ್ ಗಳಿಗೆ ಇಂತಿಷ್ಷೇ ಎಂದು ಬೆಲೆ ಎಂದು ನಿಗದಿ ಮಾಡಲಾಗುತ್ತದೆ. ಅದೇ ಪ್ರತಿಯೊಬ್ಬ ವ್ಯಕ್ತಿ ಜೀವಿಸಲು ಬೇಕಾಗಿರುವ ಅನ್ನ ನೀಡುವ ರೈತರ ಬೆಳೆಗಳಿಗೆ ಕನಿಷ್ಠ ಬೆಲೆ ನಿಗದಿ ಪಡಿಸಿ ಎಂದು ಕೇಳುವ ಹಕ್ಕು ನಮ್ಮ ದೇಶದ ರೈತರಿಗಿದೆ ಎಂದರು.
ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಬಹುದಿನಗಳ ಬೇಡಿಕೆಯಾದ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ ನೀಡುವುದಾಗಿ ಘೋಷಣೆ ಮಾಡಿದ್ದಾರಲ್ಲದೇ, ಸ್ವಾಮೀನಾಥನ್ ವರದಿಯನ್ನು ಜಾರಿಗೆ ತರುವ ಕಿಸಾನ್ ಗ್ಯಾರಂಟಿ ಘೋಷಿಸಿದ್ದಾರೆ. ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಕೇಂದ್ರದಲ್ಲಿ ಐಎನ್ ಡಿಐಎ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಮೊದಲ ದಿನವೇ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡಲಾಗುವುದೆಂದು ತಿಳಿಸಿದ್ದಾರೆ ಎಂದ ರಮೇಶ್ ಇವರು ರೈತರ ಹೋರಾಟಕ್ಕೆ ಈಗಾಗಲೇ ನಮ್ಮ ಪಕ್ಷ ಹಾಗೂ ನಾಯಕರುಗಳು ಸಂಪೂರ್ಣ ಬೆಂಬಲ ಘೋಷಣೆ ಮಾಡಿದ್ದಾರೆಂದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…