ಶಿವಮೊಗ್ಗ : ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವುದು ಸೇರಿದಂತೆ 12 ಬೇಡಿಕೆಗಳನ್ನು ಇಟ್ಟುಕೊಂಡು ರೈತ ಸಂಘಟನೆಗಳು ಹಮ್ಮಿಕೊಂಡಿರುವ ‘ದಿಲ್ಲಿ ಚಲೋ’ ಹೋರಾಟಕ್ಕೆ ಆಗಮಿಸುವ ಅನ್ನದಾತನ ಹಾದಿಗೆ ಮುಳ್ಳುತಂತಿ, ಮೊಳೆಗಳ ಪಟ್ಟಿ, ಸಿಮೆಂಟ್ ಇಟ್ಟಿಗೆ ಇರಿಸಿದ ಕೇಂದ್ರ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುವುದಾಗಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ವಕ್ತಾರ ಎಂ.ರಮೇಶ್ ಶೆಟ್ಟಿಯವರು ತಿಳಿಸಿದ್ದಾರೆ.
ಅವರು ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ, ದೆಹಲಿಯ ಗಡಿಭಾಗಗಳಿಗೆ ಬೇಲಿ ಹಾಕಿ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಕೇಂದ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸದೇ ಬಂಧಿಸಿ, ಬೆದರಿಸಿ ದೇಶದ ಬೆನ್ನುಲಬಾಗಿರುವ ರೈತರನ್ನು ಬಗ್ಗು ಬಡಿಯಬಹುದೆಂದು ತಿಳಿದಿದ್ದರೆ ಅದು ಅವರ ಭ್ರಮೆ. ನಾವು ಖರೀದಿಸುವ ಟಿವಿ, ಮೊಬೈಲ್, ವಾಷಿಂಗ್ ಮಿಷನ್, ಪೇಸ್ಟ್, ಕೂಲ್ ಡ್ರಿಂಕ್ಸ್ ಗಳಿಗೆ ಇಂತಿಷ್ಷೇ ಎಂದು ಬೆಲೆ ಎಂದು ನಿಗದಿ ಮಾಡಲಾಗುತ್ತದೆ. ಅದೇ ಪ್ರತಿಯೊಬ್ಬ ವ್ಯಕ್ತಿ ಜೀವಿಸಲು ಬೇಕಾಗಿರುವ ಅನ್ನ ನೀಡುವ ರೈತರ ಬೆಳೆಗಳಿಗೆ ಕನಿಷ್ಠ ಬೆಲೆ ನಿಗದಿ ಪಡಿಸಿ ಎಂದು ಕೇಳುವ ಹಕ್ಕು ನಮ್ಮ ದೇಶದ ರೈತರಿಗಿದೆ ಎಂದರು.
ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಬಹುದಿನಗಳ ಬೇಡಿಕೆಯಾದ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ ನೀಡುವುದಾಗಿ ಘೋಷಣೆ ಮಾಡಿದ್ದಾರಲ್ಲದೇ, ಸ್ವಾಮೀನಾಥನ್ ವರದಿಯನ್ನು ಜಾರಿಗೆ ತರುವ ಕಿಸಾನ್ ಗ್ಯಾರಂಟಿ ಘೋಷಿಸಿದ್ದಾರೆ. ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಕೇಂದ್ರದಲ್ಲಿ ಐಎನ್ ಡಿಐಎ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಮೊದಲ ದಿನವೇ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡಲಾಗುವುದೆಂದು ತಿಳಿಸಿದ್ದಾರೆ ಎಂದ ರಮೇಶ್ ಇವರು ರೈತರ ಹೋರಾಟಕ್ಕೆ ಈಗಾಗಲೇ ನಮ್ಮ ಪಕ್ಷ ಹಾಗೂ ನಾಯಕರುಗಳು ಸಂಪೂರ್ಣ ಬೆಂಬಲ ಘೋಷಣೆ ಮಾಡಿದ್ದಾರೆಂದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…