ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ

ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ 6.20 ಕ್ಕೆ ನಡೆದಿದೆ.

ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರಾಗಿರಬೇಕು ಎಂದು ಅವಳ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯನ್ನು ರೈಲ್ವೆ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ.
ಅವಳ ಆಧಾರ್ ಕಾರ್ಡ್ ನಲ್ಲಿ c/o ಎಮ್.ಗೋವಿಂದರಾಜು ಪಡಸಾಲೆಹಟ್ಟಿ,ಮಿಡಿಗೇಶಿ,ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ.
ಅವಳು ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದಾಳೆ.
ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅವಳು ಕುಳಿತು ಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿಸಿರೋಡಿನ ಕಚೇರಿಗೆ ನೀಡಿ ವಿಚಾರ ತಿಳಿಸಿದ್ದಾರೆ.
ಅವಳು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಮತ್ತು ಅವಳ ವಿಳಾಸ ವಿವರ ಸರಿಯಾಗಿ ಇನ್ನಷ್ಟೇ ತಿಳಿಯಬೇಕಿದೆ.
ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞರಾದ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಂಟ್ವಾಳ ನಗರ ಪೋಲೀಸ್ ಠಾಣೆಯ ಎ‌ಎಸ್.ಐ.ದೇವಪ್ಪ ವಿಜಯಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!