ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ 6.20 ಕ್ಕೆ ನಡೆದಿದೆ.
ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರಾಗಿರಬೇಕು ಎಂದು ಅವಳ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯನ್ನು ರೈಲ್ವೆ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ.
ಅವಳ ಆಧಾರ್ ಕಾರ್ಡ್ ನಲ್ಲಿ c/o ಎಮ್.ಗೋವಿಂದರಾಜು ಪಡಸಾಲೆಹಟ್ಟಿ,ಮಿಡಿಗೇಶಿ,ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ.
ಅವಳು ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದಾಳೆ.
ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅವಳು ಕುಳಿತು ಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿಸಿರೋಡಿನ ಕಚೇರಿಗೆ ನೀಡಿ ವಿಚಾರ ತಿಳಿಸಿದ್ದಾರೆ.
ಅವಳು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಮತ್ತು ಅವಳ ವಿಳಾಸ ವಿವರ ಸರಿಯಾಗಿ ಇನ್ನಷ್ಟೇ ತಿಳಿಯಬೇಕಿದೆ.
ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞರಾದ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಎಸ್.ಐ.ದೇವಪ್ಪ ವಿಜಯಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…