ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ 6.20 ಕ್ಕೆ ನಡೆದಿದೆ.
ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರಾಗಿರಬೇಕು ಎಂದು ಅವಳ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯನ್ನು ರೈಲ್ವೆ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ.
ಅವಳ ಆಧಾರ್ ಕಾರ್ಡ್ ನಲ್ಲಿ c/o ಎಮ್.ಗೋವಿಂದರಾಜು ಪಡಸಾಲೆಹಟ್ಟಿ,ಮಿಡಿಗೇಶಿ,ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ.
ಅವಳು ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದಾಳೆ.
ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅವಳು ಕುಳಿತು ಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿಸಿರೋಡಿನ ಕಚೇರಿಗೆ ನೀಡಿ ವಿಚಾರ ತಿಳಿಸಿದ್ದಾರೆ.
ಅವಳು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಮತ್ತು ಅವಳ ವಿಳಾಸ ವಿವರ ಸರಿಯಾಗಿ ಇನ್ನಷ್ಟೇ ತಿಳಿಯಬೇಕಿದೆ.
ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞರಾದ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಎಸ್.ಐ.ದೇವಪ್ಪ ವಿಜಯಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…