ಉಡುಪಿ: ಮಾರುತಿ ಸ್ವಿಫ್ಟ್ ಡಿಸೈರ್ ಕಾರೊಂದು ರಾಯಲ್ ಎನ್ಫೀಲ್ಡ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಭಂಡಾರ್ತಿ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಮೃತ ಸವಾರನನ್ನು ಮಹೇಂದ್ರ ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಚಿಪ್ಸಿ ಐಟಿ ಸರ್ವಿಸ್ ಪ್ರೈವೇಟ್ ಲಿ. ಕಂಪೆನಿಯ ಉದ್ಯೋಗಿಯಾಗಿದ್ದರು. ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ತನ್ನ ರಾಯಲ್ ಎನ್ ಫೀಲ್ಡ್ ಬೈಕ್ ನಲ್ಲಿ ಸೈಬ್ರಕಟ್ಟೆ ಕಡೆಯಿಂದ ಶಿರೂರು ಮೂರುಕೈ ಕಡೆಗೆ ಹೋಗುತ್ತಿದ್ದರು. ಬಿಲ್ಲಾಡಿ ಗ್ರಾಮದ ಭಂಡಾರ್ತಿ ಬಳಿ ತಲುಪಿದಾಗ ಗಣೇಶ್ ಎಂಬಾತ ತನ್ನ ಮಾರುತಿ ಸ್ವಿಫ್ಟ್ ಡಿಸೈರ್ ಕಾರನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಾಯಲ್ ಎನ್ ಫೀಲ್ಡ್ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಮಹೇಂದ್ರ ಅವರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…