ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ತಾಲೂಕು ಪಂಚಾಯತ್ ಇ ಒ ಹಾಗೂ ಪಂಚಾಯತ್ ಅಧ್ಯಕ್ಷರ ನಡುವೆ ಜಟಾಪಟಿ; ಸ್ಥಳದಲ್ಲಿ ಉದ್ವಿಗ್ನ; ಪೊಲೀಸ್ ಬಂದೋಬಸ್ತು

ಮುಲ್ಕಿ: ಹಳೆಯಂಗಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಪಟ್ಟಂತೆ ತಾಲೂಕು ಪಂಚಾಯತ್ ಅಧಿಕಾರಿ ಹಾಗೂ ಪಂಚಾಯತ್ ಅಧ್ಯಕ್ಷರ ನಡುವೆ ಮಾತಿನ ಚಕಮಕಿ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿದ್ದಂತೆ ಸ್ಥಳಕ್ಕೆ ಮುಲ್ಕಿ ಪೊಲೀಸರು ಆಗಮಿಸಿ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತು ಏರ್ಪಡಿಸಿದ್ದಾರೆ.


ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾವಂಜೆ ಬಳಿ ಸ್ಥಳೀಯ ಉದ್ಯಮಿ ರೋಹಿತ್ ಎಂಬವರು ವಾಣಿಜ್ಯ ಬಳಕೆಗೆ ಕುಡಿಯುವ ನೀರಿನ ಸಂಪರ್ಕವನ್ನು ಪಂಚಾಯಿತಿಯಿಂದ ಕೇಳಿದ್ದರು. ಆದರೆ ಪಂಚಾಯತ್ ನಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ವಾಣಿಜ್ಯ ಬಳಕೆಯ ಸಂಪರ್ಕ ನಿರಾಕರಿಸಲಾಗಿತ್ತು. ಈ ಬಗ್ಗೆ ಗ್ರಾಮ ಪಂಚಾಯತ್ ಸದಸ್ಯರ ಸಭೆಯಲ್ಲೂ ನಿರ್ಣಯಿಸಲಾಗಿತ್ತು. ಆದರೆ ರೋಹಿತ್ ತಾಲೂಕು ಪಂಚಾಯತ್ ಇ ಒ ಗುರುಶಾಂತಪ್ಪ ರವರಿಗೆ ದೂರು ನೀಡಿದ್ದು ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಮನವಿ ಮಾಡಿದ್ದರು ಹಾಗೂ ನೀರಿನ ಸಂಪರ್ಕ ಕಲ್ಪಿಸದ ಪಂಚಾಯತ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇತ್ತ ತಾಲೂಕ್ ಪಂಚಾಯತ್ ಅಧಿಕಾರಿ ರವರು ಪಂಚಾಯತ್ ಅಧ್ಯಕ್ಷರಿಗೆ ರೋಹಿತ್ ರವರಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವಂತೆ ಸೂಚನೆ ನೀಡಿದ್ದು ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ಸ್ಪಷ್ಟವಾಗಿ ನಿರಾಕರಿಸಿ ರೋಹಿತ್ ರವರು ಪಂಚಾಯತ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದು ತನಿಖೆ ನಡೆದ ಬಳಿಕ ಕುಡಿಯುವ ನೀರಿನ ಸಂಪರ್ಕದ ಬಗ್ಗೆ ವಿಚಾರಣೆ ನಡೆಸಬೇಕಾಗಿದೆ ಎಂದು ಸ್ಪಷ್ಟಉತ್ತರ ನೀಡಿದ್ದಾರೆ.


ಆದರೆ ತಾಲೂಕು ಪಂಚಾಯತ್ ಅಧಿಕಾರಿ ಗುರುಶಾಂತಪ್ಪರವರು ಗುರುವಾರ ಏಕಾಏಕಿ ಪಂಚಾಯತಿಗೆ ಆಗಮಿಸಿ ಕುಡಿಯುವ ನೀರಿನ ಸಂಪರ್ಕದ ಬಗ್ಗೆ ಪಂಚಾಯತ್ ಅಧ್ಯಕ್ಷರೊಂದಿಗೆ ಮಾತಿನ ಚಕಮಕಿ ಹಾಗೂ ಇಬ್ಬರಿಂದಲೂ ಅವಾಚ್ಯ ಶಬ್ದಗಳಿಂದ ನಿಂದನೆ ನಡೆದಿದ್ದು ಪರೀಸ್ಥಿತಿ ತಾರಕಕ್ಕೆ ಏರುತ್ತಿದ್ದಂತೆ ಮುಲ್ಕಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಬಗ್ಗೆ ತಾಲೂಕು ಪಂಚಾಯತ್ ಇ ಒ ಗುರು ಶಾಂತಪ್ಪ ಮಾತನಾಡಿ ಪಂಚಾಯತ್ ಅಧ್ಯಕ್ಷರು ನಾಗರಿಕರ ಮನವಿಗೆ ಸ್ಪಂದಿಸದೆ ಸಮಸ್ಯೆ ಬಗೆಹರಿಸಲು ಬಂದ ಕರ್ತವ್ಯ ನಿರತ ಅಧಿಕಾರಿಗೆ ಅಡ್ಡಿಪಡಿಸಿದ್ದು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.


ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ನೀರಿನ ಸಮಸ್ಯೆಗೆ ಸ್ಪಂದಿಸದೆ ಓರ್ವ ನಾಗರಿಕನ ವಾಣಿಜ್ಯ ಬಳಕೆಗೆ ಕುಡಿಯುವ ನೀರಿನ ಸಂಪರ್ಕ ಸಮಸ್ಯೆಗೆ ಇ ಒ ಮುಂದಾಗಿರುತ್ತಿರುವುದು ದುರದೃಷ್ಟಕರ ಹಾಗೂ ಸಂಶಯಾತ್ಮಕವಾಗಿದೆ ಎಂದಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸರಿಗೆ ದೂರು ನೀಡಲಾಗುವುದು ಎಂದಿದ್ದಾರೆ

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!