ಮುಲ್ಕಿ: ಹಳೆಯಂಗಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಪಟ್ಟಂತೆ ತಾಲೂಕು ಪಂಚಾಯತ್ ಅಧಿಕಾರಿ ಹಾಗೂ ಪಂಚಾಯತ್ ಅಧ್ಯಕ್ಷರ ನಡುವೆ ಮಾತಿನ ಚಕಮಕಿ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿದ್ದಂತೆ ಸ್ಥಳಕ್ಕೆ ಮುಲ್ಕಿ ಪೊಲೀಸರು ಆಗಮಿಸಿ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತು ಏರ್ಪಡಿಸಿದ್ದಾರೆ.
ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾವಂಜೆ ಬಳಿ ಸ್ಥಳೀಯ ಉದ್ಯಮಿ ರೋಹಿತ್ ಎಂಬವರು ವಾಣಿಜ್ಯ ಬಳಕೆಗೆ ಕುಡಿಯುವ ನೀರಿನ ಸಂಪರ್ಕವನ್ನು ಪಂಚಾಯಿತಿಯಿಂದ ಕೇಳಿದ್ದರು. ಆದರೆ ಪಂಚಾಯತ್ ನಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ವಾಣಿಜ್ಯ ಬಳಕೆಯ ಸಂಪರ್ಕ ನಿರಾಕರಿಸಲಾಗಿತ್ತು. ಈ ಬಗ್ಗೆ ಗ್ರಾಮ ಪಂಚಾಯತ್ ಸದಸ್ಯರ ಸಭೆಯಲ್ಲೂ ನಿರ್ಣಯಿಸಲಾಗಿತ್ತು. ಆದರೆ ರೋಹಿತ್ ತಾಲೂಕು ಪಂಚಾಯತ್ ಇ ಒ ಗುರುಶಾಂತಪ್ಪ ರವರಿಗೆ ದೂರು ನೀಡಿದ್ದು ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಮನವಿ ಮಾಡಿದ್ದರು ಹಾಗೂ ನೀರಿನ ಸಂಪರ್ಕ ಕಲ್ಪಿಸದ ಪಂಚಾಯತ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇತ್ತ ತಾಲೂಕ್ ಪಂಚಾಯತ್ ಅಧಿಕಾರಿ ರವರು ಪಂಚಾಯತ್ ಅಧ್ಯಕ್ಷರಿಗೆ ರೋಹಿತ್ ರವರಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವಂತೆ ಸೂಚನೆ ನೀಡಿದ್ದು ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ಸ್ಪಷ್ಟವಾಗಿ ನಿರಾಕರಿಸಿ ರೋಹಿತ್ ರವರು ಪಂಚಾಯತ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದು ತನಿಖೆ ನಡೆದ ಬಳಿಕ ಕುಡಿಯುವ ನೀರಿನ ಸಂಪರ್ಕದ ಬಗ್ಗೆ ವಿಚಾರಣೆ ನಡೆಸಬೇಕಾಗಿದೆ ಎಂದು ಸ್ಪಷ್ಟಉತ್ತರ ನೀಡಿದ್ದಾರೆ.
ಆದರೆ ತಾಲೂಕು ಪಂಚಾಯತ್ ಅಧಿಕಾರಿ ಗುರುಶಾಂತಪ್ಪರವರು ಗುರುವಾರ ಏಕಾಏಕಿ ಪಂಚಾಯತಿಗೆ ಆಗಮಿಸಿ ಕುಡಿಯುವ ನೀರಿನ ಸಂಪರ್ಕದ ಬಗ್ಗೆ ಪಂಚಾಯತ್ ಅಧ್ಯಕ್ಷರೊಂದಿಗೆ ಮಾತಿನ ಚಕಮಕಿ ಹಾಗೂ ಇಬ್ಬರಿಂದಲೂ ಅವಾಚ್ಯ ಶಬ್ದಗಳಿಂದ ನಿಂದನೆ ನಡೆದಿದ್ದು ಪರೀಸ್ಥಿತಿ ತಾರಕಕ್ಕೆ ಏರುತ್ತಿದ್ದಂತೆ ಮುಲ್ಕಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಬಗ್ಗೆ ತಾಲೂಕು ಪಂಚಾಯತ್ ಇ ಒ ಗುರು ಶಾಂತಪ್ಪ ಮಾತನಾಡಿ ಪಂಚಾಯತ್ ಅಧ್ಯಕ್ಷರು ನಾಗರಿಕರ ಮನವಿಗೆ ಸ್ಪಂದಿಸದೆ ಸಮಸ್ಯೆ ಬಗೆಹರಿಸಲು ಬಂದ ಕರ್ತವ್ಯ ನಿರತ ಅಧಿಕಾರಿಗೆ ಅಡ್ಡಿಪಡಿಸಿದ್ದು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ನೀರಿನ ಸಮಸ್ಯೆಗೆ ಸ್ಪಂದಿಸದೆ ಓರ್ವ ನಾಗರಿಕನ ವಾಣಿಜ್ಯ ಬಳಕೆಗೆ ಕುಡಿಯುವ ನೀರಿನ ಸಂಪರ್ಕ ಸಮಸ್ಯೆಗೆ ಇ ಒ ಮುಂದಾಗಿರುತ್ತಿರುವುದು ದುರದೃಷ್ಟಕರ ಹಾಗೂ ಸಂಶಯಾತ್ಮಕವಾಗಿದೆ ಎಂದಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸರಿಗೆ ದೂರು ನೀಡಲಾಗುವುದು ಎಂದಿದ್ದಾರೆ
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…