ಮುಲ್ಕಿ: ಹಳೆಯಂಗಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಪಟ್ಟಂತೆ ತಾಲೂಕು ಪಂಚಾಯತ್ ಅಧಿಕಾರಿ ಹಾಗೂ ಪಂಚಾಯತ್ ಅಧ್ಯಕ್ಷರ ನಡುವೆ ಮಾತಿನ ಚಕಮಕಿ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿದ್ದಂತೆ ಸ್ಥಳಕ್ಕೆ ಮುಲ್ಕಿ ಪೊಲೀಸರು ಆಗಮಿಸಿ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತು ಏರ್ಪಡಿಸಿದ್ದಾರೆ.
ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾವಂಜೆ ಬಳಿ ಸ್ಥಳೀಯ ಉದ್ಯಮಿ ರೋಹಿತ್ ಎಂಬವರು ವಾಣಿಜ್ಯ ಬಳಕೆಗೆ ಕುಡಿಯುವ ನೀರಿನ ಸಂಪರ್ಕವನ್ನು ಪಂಚಾಯಿತಿಯಿಂದ ಕೇಳಿದ್ದರು. ಆದರೆ ಪಂಚಾಯತ್ ನಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ವಾಣಿಜ್ಯ ಬಳಕೆಯ ಸಂಪರ್ಕ ನಿರಾಕರಿಸಲಾಗಿತ್ತು. ಈ ಬಗ್ಗೆ ಗ್ರಾಮ ಪಂಚಾಯತ್ ಸದಸ್ಯರ ಸಭೆಯಲ್ಲೂ ನಿರ್ಣಯಿಸಲಾಗಿತ್ತು. ಆದರೆ ರೋಹಿತ್ ತಾಲೂಕು ಪಂಚಾಯತ್ ಇ ಒ ಗುರುಶಾಂತಪ್ಪ ರವರಿಗೆ ದೂರು ನೀಡಿದ್ದು ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಮನವಿ ಮಾಡಿದ್ದರು ಹಾಗೂ ನೀರಿನ ಸಂಪರ್ಕ ಕಲ್ಪಿಸದ ಪಂಚಾಯತ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇತ್ತ ತಾಲೂಕ್ ಪಂಚಾಯತ್ ಅಧಿಕಾರಿ ರವರು ಪಂಚಾಯತ್ ಅಧ್ಯಕ್ಷರಿಗೆ ರೋಹಿತ್ ರವರಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವಂತೆ ಸೂಚನೆ ನೀಡಿದ್ದು ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ಸ್ಪಷ್ಟವಾಗಿ ನಿರಾಕರಿಸಿ ರೋಹಿತ್ ರವರು ಪಂಚಾಯತ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದು ತನಿಖೆ ನಡೆದ ಬಳಿಕ ಕುಡಿಯುವ ನೀರಿನ ಸಂಪರ್ಕದ ಬಗ್ಗೆ ವಿಚಾರಣೆ ನಡೆಸಬೇಕಾಗಿದೆ ಎಂದು ಸ್ಪಷ್ಟಉತ್ತರ ನೀಡಿದ್ದಾರೆ.
ಆದರೆ ತಾಲೂಕು ಪಂಚಾಯತ್ ಅಧಿಕಾರಿ ಗುರುಶಾಂತಪ್ಪರವರು ಗುರುವಾರ ಏಕಾಏಕಿ ಪಂಚಾಯತಿಗೆ ಆಗಮಿಸಿ ಕುಡಿಯುವ ನೀರಿನ ಸಂಪರ್ಕದ ಬಗ್ಗೆ ಪಂಚಾಯತ್ ಅಧ್ಯಕ್ಷರೊಂದಿಗೆ ಮಾತಿನ ಚಕಮಕಿ ಹಾಗೂ ಇಬ್ಬರಿಂದಲೂ ಅವಾಚ್ಯ ಶಬ್ದಗಳಿಂದ ನಿಂದನೆ ನಡೆದಿದ್ದು ಪರೀಸ್ಥಿತಿ ತಾರಕಕ್ಕೆ ಏರುತ್ತಿದ್ದಂತೆ ಮುಲ್ಕಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಬಗ್ಗೆ ತಾಲೂಕು ಪಂಚಾಯತ್ ಇ ಒ ಗುರು ಶಾಂತಪ್ಪ ಮಾತನಾಡಿ ಪಂಚಾಯತ್ ಅಧ್ಯಕ್ಷರು ನಾಗರಿಕರ ಮನವಿಗೆ ಸ್ಪಂದಿಸದೆ ಸಮಸ್ಯೆ ಬಗೆಹರಿಸಲು ಬಂದ ಕರ್ತವ್ಯ ನಿರತ ಅಧಿಕಾರಿಗೆ ಅಡ್ಡಿಪಡಿಸಿದ್ದು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ನೀರಿನ ಸಮಸ್ಯೆಗೆ ಸ್ಪಂದಿಸದೆ ಓರ್ವ ನಾಗರಿಕನ ವಾಣಿಜ್ಯ ಬಳಕೆಗೆ ಕುಡಿಯುವ ನೀರಿನ ಸಂಪರ್ಕ ಸಮಸ್ಯೆಗೆ ಇ ಒ ಮುಂದಾಗಿರುತ್ತಿರುವುದು ದುರದೃಷ್ಟಕರ ಹಾಗೂ ಸಂಶಯಾತ್ಮಕವಾಗಿದೆ ಎಂದಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸರಿಗೆ ದೂರು ನೀಡಲಾಗುವುದು ಎಂದಿದ್ದಾರೆ
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…