ಮುಲ್ಕಿ: ಹಳೆಯಂಗಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಪಟ್ಟಂತೆ ತಾಲೂಕು ಪಂಚಾಯತ್ ಅಧಿಕಾರಿ ಹಾಗೂ ಪಂಚಾಯತ್ ಅಧ್ಯಕ್ಷರ ನಡುವೆ ಮಾತಿನ ಚಕಮಕಿ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿದ್ದಂತೆ ಸ್ಥಳಕ್ಕೆ ಮುಲ್ಕಿ ಪೊಲೀಸರು ಆಗಮಿಸಿ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತು ಏರ್ಪಡಿಸಿದ್ದಾರೆ.
ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾವಂಜೆ ಬಳಿ ಸ್ಥಳೀಯ ಉದ್ಯಮಿ ರೋಹಿತ್ ಎಂಬವರು ವಾಣಿಜ್ಯ ಬಳಕೆಗೆ ಕುಡಿಯುವ ನೀರಿನ ಸಂಪರ್ಕವನ್ನು ಪಂಚಾಯಿತಿಯಿಂದ ಕೇಳಿದ್ದರು. ಆದರೆ ಪಂಚಾಯತ್ ನಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ವಾಣಿಜ್ಯ ಬಳಕೆಯ ಸಂಪರ್ಕ ನಿರಾಕರಿಸಲಾಗಿತ್ತು. ಈ ಬಗ್ಗೆ ಗ್ರಾಮ ಪಂಚಾಯತ್ ಸದಸ್ಯರ ಸಭೆಯಲ್ಲೂ ನಿರ್ಣಯಿಸಲಾಗಿತ್ತು. ಆದರೆ ರೋಹಿತ್ ತಾಲೂಕು ಪಂಚಾಯತ್ ಇ ಒ ಗುರುಶಾಂತಪ್ಪ ರವರಿಗೆ ದೂರು ನೀಡಿದ್ದು ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಮನವಿ ಮಾಡಿದ್ದರು ಹಾಗೂ ನೀರಿನ ಸಂಪರ್ಕ ಕಲ್ಪಿಸದ ಪಂಚಾಯತ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇತ್ತ ತಾಲೂಕ್ ಪಂಚಾಯತ್ ಅಧಿಕಾರಿ ರವರು ಪಂಚಾಯತ್ ಅಧ್ಯಕ್ಷರಿಗೆ ರೋಹಿತ್ ರವರಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವಂತೆ ಸೂಚನೆ ನೀಡಿದ್ದು ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ಸ್ಪಷ್ಟವಾಗಿ ನಿರಾಕರಿಸಿ ರೋಹಿತ್ ರವರು ಪಂಚಾಯತ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದು ತನಿಖೆ ನಡೆದ ಬಳಿಕ ಕುಡಿಯುವ ನೀರಿನ ಸಂಪರ್ಕದ ಬಗ್ಗೆ ವಿಚಾರಣೆ ನಡೆಸಬೇಕಾಗಿದೆ ಎಂದು ಸ್ಪಷ್ಟಉತ್ತರ ನೀಡಿದ್ದಾರೆ.
ಆದರೆ ತಾಲೂಕು ಪಂಚಾಯತ್ ಅಧಿಕಾರಿ ಗುರುಶಾಂತಪ್ಪರವರು ಗುರುವಾರ ಏಕಾಏಕಿ ಪಂಚಾಯತಿಗೆ ಆಗಮಿಸಿ ಕುಡಿಯುವ ನೀರಿನ ಸಂಪರ್ಕದ ಬಗ್ಗೆ ಪಂಚಾಯತ್ ಅಧ್ಯಕ್ಷರೊಂದಿಗೆ ಮಾತಿನ ಚಕಮಕಿ ಹಾಗೂ ಇಬ್ಬರಿಂದಲೂ ಅವಾಚ್ಯ ಶಬ್ದಗಳಿಂದ ನಿಂದನೆ ನಡೆದಿದ್ದು ಪರೀಸ್ಥಿತಿ ತಾರಕಕ್ಕೆ ಏರುತ್ತಿದ್ದಂತೆ ಮುಲ್ಕಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಬಗ್ಗೆ ತಾಲೂಕು ಪಂಚಾಯತ್ ಇ ಒ ಗುರು ಶಾಂತಪ್ಪ ಮಾತನಾಡಿ ಪಂಚಾಯತ್ ಅಧ್ಯಕ್ಷರು ನಾಗರಿಕರ ಮನವಿಗೆ ಸ್ಪಂದಿಸದೆ ಸಮಸ್ಯೆ ಬಗೆಹರಿಸಲು ಬಂದ ಕರ್ತವ್ಯ ನಿರತ ಅಧಿಕಾರಿಗೆ ಅಡ್ಡಿಪಡಿಸಿದ್ದು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ನೀರಿನ ಸಮಸ್ಯೆಗೆ ಸ್ಪಂದಿಸದೆ ಓರ್ವ ನಾಗರಿಕನ ವಾಣಿಜ್ಯ ಬಳಕೆಗೆ ಕುಡಿಯುವ ನೀರಿನ ಸಂಪರ್ಕ ಸಮಸ್ಯೆಗೆ ಇ ಒ ಮುಂದಾಗಿರುತ್ತಿರುವುದು ದುರದೃಷ್ಟಕರ ಹಾಗೂ ಸಂಶಯಾತ್ಮಕವಾಗಿದೆ ಎಂದಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸರಿಗೆ ದೂರು ನೀಡಲಾಗುವುದು ಎಂದಿದ್ದಾರೆ
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…