ಜನ ಮನದ ನಾಡಿ ಮಿಡಿತ

Advertisement

ಸಾಲ ಮನ್ನಾ ವಂಚಿತ ರೈತರ ಬೃಹತ್ ಪ್ರತಿಭಟನೆ

ಕರ್ನಾಟಕ ಸರಕಾರ 2018ರ ಸಹಕಾರಿ ಸಂಘ ಸೊಸೈಟಿ ಬ್ಯಾಂಕ್ ಇತ್ಯಾದಿ ಗಳಿಂದ ಸಾಲ ಮನ್ನಾ ಪರಿಹಾರದ ಮೊಬಲಗು ದೊರಕದ ರೈತರ ಪರವಾಗಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯು ಪ್ರಜಾಪ್ರಭುತ್ವದ ವ್ಯವಸ್ಥೆ ಅಡಿಯಲ್ಲಿ ಪುತ್ತೂರು ಕಂದಾಯ ಉಪ ವಿಭಾಗ ಕಚೇರಿ ಎದುರುಗಡೆ ಫೆ .20ರಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.


ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಕಿಶೋರ್ ಶಿರಾಡಿ ಬುಧವಾರ ಸುಬ್ರಹ್ಮಣ್ಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇವತ್ತು ಆಧುನಿಕ ತಂತ್ರಜ್ಞಾನ ಇಷ್ಟು ಮುಂದುವರಿದರು ಸರಕಾರದ ಸಾಲ ಮನ್ನಾ ಯೋಜನೆಗಳು ಮತ್ತು ಇನ್ನಿತರ ಯೋಜನೆಗಳು ಅರ್ಹತೆ ಇರುವ ರೈತರಿಗೆ ಸಿಗದಿರುವುದು ಈ ರಾಜ್ಯದ ರೈತರ ವಿಪರ್ಯಾಸ . ರೈತರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳು ಗಳ ವಿರುದ್ಧ ಮತ್ತು ಸಾಲ ಮನ್ನಾ ವಂಚಿತ ರೈತರಿಗೆ ಸಾಲಮನ್ನಾದ ಒಂದು ಲಕ್ಷ ರೂ ಹಣ ಸಿಗದಿರುವ ಸಿಗುವ ತನಕ ಈ ಹೋರಾಟ ಮುಂದುವರೆಯಲಿದೆ ಎಂದು ಕಿಶೋರ್ ಶಿರಾಡಿ ಅವರು ಹೇಳಿದರು ಪ್ರತಿಭಟನೆ ದಿನ ಸಂಬಂಧಪಟ್ಟ ಡಿಸಿ ಬ್ಯಾಂಕಿನ ಅಧ್ಯಕ್ಷರು ನಿರ್ದೇಶಕರು ಹಾಗೂ ಬ್ಯಾಂಕಿನ ಅಧಿಕಾರಿಗಳು ನಮ್ಮ ಮನೆ ಸ್ವೀಕರಿಸಲು ಸ್ಥಳಕ್ಕೆ ಬರಬೇಕು ಹಾಗೂ ರೈತರಿಗೆ ಸಿಗಬೇಕಾದ ಹಣ ಎಲ್ಲಿದೆ ಯಾಕಾಗಿ ಹೀಗಾಗಿದೆ ಎಂಬುದರ ಬಗ್ಗೆ ಉತ್ತರ ನೀಡಬೇಕು ಎಂದು ಅವರು ಅಗ್ರಹಿಸಿದರು.

ಅಲ್ಲದೆ ಸಾಲ ಮನ್ನಾ ಯೋಜನೆ ಆರಂಭವಾಗಿ ಆರು ವರ್ಷ ಆಗಿದೆ ,ರೈತರು ಇಲ್ಲಿಯವರೆಗೆ ಕಾದು ಕಾದು ಕಂಗಳಾಗಿದ್ದರೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿ ಸಂಚಾಲಕ ಜಯಪ್ರಕಾಶ್ ಕೂಜುಗೋಡು, ಸದಸ್ಯರುಗಳಾದ ಮೋಹನ ಕೆದಿರ, ರಮೇಶ್ ಎಂ. ಎಸ್, ಹೂವಯ್ಯ ಕಲ್ಲೇರಿ ,ಪ್ರವೀಣ ಕೋನಡ್ಕ, ಎಂ ಮುತ್ತಪ್ಪ ಗೌಡ, ಡಿ ಲಿಂಗಪ್ಪಗೌಡ, ನರೇಂದ್ರ ಕೂಜುಗೋಡು ಹಾಗೂ ಲೋಕೇಶ್ ಕೋನಡ್ಕ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!