ಕರ್ನಾಟಕ ಸರಕಾರ 2018ರ ಸಹಕಾರಿ ಸಂಘ ಸೊಸೈಟಿ ಬ್ಯಾಂಕ್ ಇತ್ಯಾದಿ ಗಳಿಂದ ಸಾಲ ಮನ್ನಾ ಪರಿಹಾರದ ಮೊಬಲಗು ದೊರಕದ ರೈತರ ಪರವಾಗಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯು ಪ್ರಜಾಪ್ರಭುತ್ವದ ವ್ಯವಸ್ಥೆ ಅಡಿಯಲ್ಲಿ ಪುತ್ತೂರು ಕಂದಾಯ ಉಪ ವಿಭಾಗ ಕಚೇರಿ ಎದುರುಗಡೆ ಫೆ .20ರಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಕಿಶೋರ್ ಶಿರಾಡಿ ಬುಧವಾರ ಸುಬ್ರಹ್ಮಣ್ಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇವತ್ತು ಆಧುನಿಕ ತಂತ್ರಜ್ಞಾನ ಇಷ್ಟು ಮುಂದುವರಿದರು ಸರಕಾರದ ಸಾಲ ಮನ್ನಾ ಯೋಜನೆಗಳು ಮತ್ತು ಇನ್ನಿತರ ಯೋಜನೆಗಳು ಅರ್ಹತೆ ಇರುವ ರೈತರಿಗೆ ಸಿಗದಿರುವುದು ಈ ರಾಜ್ಯದ ರೈತರ ವಿಪರ್ಯಾಸ . ರೈತರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳು ಗಳ ವಿರುದ್ಧ ಮತ್ತು ಸಾಲ ಮನ್ನಾ ವಂಚಿತ ರೈತರಿಗೆ ಸಾಲಮನ್ನಾದ ಒಂದು ಲಕ್ಷ ರೂ ಹಣ ಸಿಗದಿರುವ ಸಿಗುವ ತನಕ ಈ ಹೋರಾಟ ಮುಂದುವರೆಯಲಿದೆ ಎಂದು ಕಿಶೋರ್ ಶಿರಾಡಿ ಅವರು ಹೇಳಿದರು ಪ್ರತಿಭಟನೆ ದಿನ ಸಂಬಂಧಪಟ್ಟ ಡಿಸಿ ಬ್ಯಾಂಕಿನ ಅಧ್ಯಕ್ಷರು ನಿರ್ದೇಶಕರು ಹಾಗೂ ಬ್ಯಾಂಕಿನ ಅಧಿಕಾರಿಗಳು ನಮ್ಮ ಮನೆ ಸ್ವೀಕರಿಸಲು ಸ್ಥಳಕ್ಕೆ ಬರಬೇಕು ಹಾಗೂ ರೈತರಿಗೆ ಸಿಗಬೇಕಾದ ಹಣ ಎಲ್ಲಿದೆ ಯಾಕಾಗಿ ಹೀಗಾಗಿದೆ ಎಂಬುದರ ಬಗ್ಗೆ ಉತ್ತರ ನೀಡಬೇಕು ಎಂದು ಅವರು ಅಗ್ರಹಿಸಿದರು.
ಅಲ್ಲದೆ ಸಾಲ ಮನ್ನಾ ಯೋಜನೆ ಆರಂಭವಾಗಿ ಆರು ವರ್ಷ ಆಗಿದೆ ,ರೈತರು ಇಲ್ಲಿಯವರೆಗೆ ಕಾದು ಕಾದು ಕಂಗಳಾಗಿದ್ದರೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿ ಸಂಚಾಲಕ ಜಯಪ್ರಕಾಶ್ ಕೂಜುಗೋಡು, ಸದಸ್ಯರುಗಳಾದ ಮೋಹನ ಕೆದಿರ, ರಮೇಶ್ ಎಂ. ಎಸ್, ಹೂವಯ್ಯ ಕಲ್ಲೇರಿ ,ಪ್ರವೀಣ ಕೋನಡ್ಕ, ಎಂ ಮುತ್ತಪ್ಪ ಗೌಡ, ಡಿ ಲಿಂಗಪ್ಪಗೌಡ, ನರೇಂದ್ರ ಕೂಜುಗೋಡು ಹಾಗೂ ಲೋಕೇಶ್ ಕೋನಡ್ಕ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…