ಕರ್ನಾಟಕ ಸರಕಾರ 2018ರ ಸಹಕಾರಿ ಸಂಘ ಸೊಸೈಟಿ ಬ್ಯಾಂಕ್ ಇತ್ಯಾದಿ ಗಳಿಂದ ಸಾಲ ಮನ್ನಾ ಪರಿಹಾರದ ಮೊಬಲಗು ದೊರಕದ ರೈತರ ಪರವಾಗಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯು ಪ್ರಜಾಪ್ರಭುತ್ವದ ವ್ಯವಸ್ಥೆ ಅಡಿಯಲ್ಲಿ ಪುತ್ತೂರು ಕಂದಾಯ ಉಪ ವಿಭಾಗ ಕಚೇರಿ ಎದುರುಗಡೆ ಫೆ .20ರಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಕಿಶೋರ್ ಶಿರಾಡಿ ಬುಧವಾರ ಸುಬ್ರಹ್ಮಣ್ಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇವತ್ತು ಆಧುನಿಕ ತಂತ್ರಜ್ಞಾನ ಇಷ್ಟು ಮುಂದುವರಿದರು ಸರಕಾರದ ಸಾಲ ಮನ್ನಾ ಯೋಜನೆಗಳು ಮತ್ತು ಇನ್ನಿತರ ಯೋಜನೆಗಳು ಅರ್ಹತೆ ಇರುವ ರೈತರಿಗೆ ಸಿಗದಿರುವುದು ಈ ರಾಜ್ಯದ ರೈತರ ವಿಪರ್ಯಾಸ . ರೈತರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳು ಗಳ ವಿರುದ್ಧ ಮತ್ತು ಸಾಲ ಮನ್ನಾ ವಂಚಿತ ರೈತರಿಗೆ ಸಾಲಮನ್ನಾದ ಒಂದು ಲಕ್ಷ ರೂ ಹಣ ಸಿಗದಿರುವ ಸಿಗುವ ತನಕ ಈ ಹೋರಾಟ ಮುಂದುವರೆಯಲಿದೆ ಎಂದು ಕಿಶೋರ್ ಶಿರಾಡಿ ಅವರು ಹೇಳಿದರು ಪ್ರತಿಭಟನೆ ದಿನ ಸಂಬಂಧಪಟ್ಟ ಡಿಸಿ ಬ್ಯಾಂಕಿನ ಅಧ್ಯಕ್ಷರು ನಿರ್ದೇಶಕರು ಹಾಗೂ ಬ್ಯಾಂಕಿನ ಅಧಿಕಾರಿಗಳು ನಮ್ಮ ಮನೆ ಸ್ವೀಕರಿಸಲು ಸ್ಥಳಕ್ಕೆ ಬರಬೇಕು ಹಾಗೂ ರೈತರಿಗೆ ಸಿಗಬೇಕಾದ ಹಣ ಎಲ್ಲಿದೆ ಯಾಕಾಗಿ ಹೀಗಾಗಿದೆ ಎಂಬುದರ ಬಗ್ಗೆ ಉತ್ತರ ನೀಡಬೇಕು ಎಂದು ಅವರು ಅಗ್ರಹಿಸಿದರು.
ಅಲ್ಲದೆ ಸಾಲ ಮನ್ನಾ ಯೋಜನೆ ಆರಂಭವಾಗಿ ಆರು ವರ್ಷ ಆಗಿದೆ ,ರೈತರು ಇಲ್ಲಿಯವರೆಗೆ ಕಾದು ಕಾದು ಕಂಗಳಾಗಿದ್ದರೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿ ಸಂಚಾಲಕ ಜಯಪ್ರಕಾಶ್ ಕೂಜುಗೋಡು, ಸದಸ್ಯರುಗಳಾದ ಮೋಹನ ಕೆದಿರ, ರಮೇಶ್ ಎಂ. ಎಸ್, ಹೂವಯ್ಯ ಕಲ್ಲೇರಿ ,ಪ್ರವೀಣ ಕೋನಡ್ಕ, ಎಂ ಮುತ್ತಪ್ಪ ಗೌಡ, ಡಿ ಲಿಂಗಪ್ಪಗೌಡ, ನರೇಂದ್ರ ಕೂಜುಗೋಡು ಹಾಗೂ ಲೋಕೇಶ್ ಕೋನಡ್ಕ ಉಪಸ್ಥಿತರಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…