ಜನ ಮನದ ನಾಡಿ ಮಿಡಿತ

Advertisement

ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್‌ ಮೀಡಿಯಾ ಕೋ-ಕನ್ವಿನರ್ ಆಗಿ ಅಕ್ಷಯ್‌ ರೈ ದಂಬೆಕಾನ ಆಯ್ಕೆ

ಪುತ್ತೂರು ಮೂಲದ ಅಕ್ಷಯ್‌ ರೈ ದಂಬೆಕಾನ ರವರು ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್‌ ಮೀಡಿಯಾ ಕೋ-ಕನ್ವಿನರ್ ಆಗಿ ಆಯ್ಕೆಯಾಗಿದ್ದಾರೆ. ರಾಜ್ಯ ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕರಾದ ಪ್ರಶಾಂತ್‌ ಮಾಕ್ನೂರುರವರು ಇಂದು ಘೋಷಿಸಿರುತ್ತಾರೆ.

ಕಳೆದ ಹನ್ನೆರಡು ವರ್ಷಗಳ ಕಾಲ ಬಿಜೆಪಿ ಯುವಮೋರ್ಚಾದ ಮಂಡಲ ಜಿಲ್ಲೆ ಹಾಗೂ ರಾಜ್ಯದ ಹಲವಾರು ಜವಬ್ದಾರಿಯನ್ನು ನಿಭಾಯಿಸಿ, ಬೆಂಗಳೂರು ಜಿಲ್ಲೆ ಖಜಾಂಜಿಯಾಗಿ ನಂತರ ರಾಜ್ಯದ ಕಾರ್ಯಕಾರಿಣಿ ಸದಸ್ಯರಾಗಿ ತದನಂತರ ಮಾಧ್ಯಮದ ಸಂಚಾಲಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಚುಣಾವಣೆಯ ತಮಿಳುನಾಡು ರಾಜ್ಯದ ವಿಧಾನ ಸಭಾ ಚುಣಾವಣೆಯ ಸಂದರ್ಭದಲ್ಲಿ ಕನ್ಯಾಕುಮಾರಿ ಜಿಲ್ಲೆಯ ಕೊಲಚ್ಚಿಲ್‌ ಮತ್ತು ನಾರಗಕೋವಿ ಕ್ಷೇತ್ರಗಳ ಪ್ರಭಾರಿಯಾಗಿ ಕೆಲಸ ಮಾಡಿರುತ್ತಾರೆ. ತದನಂತರ ಹಲವಾರು ಎಂ ಎಲ್ ಎ ಮತ್ತು ಎಂಎಲ್ಸಿ ಚುನಾವಣೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಂಡವರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಪ್ರಭಾರಿಯಾಗಿ ಕೆಲಸ ಮಾಡಿದ್ದು, ಇವರ ಮೇಲೆ ಹಲ್ಲೆ ನಡೆದಿದ್ದು,ಈ ಬಗ್ಗೆ ದಾಖಲಾಗಿತ್ತು.

ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಹಲವಾರು ಜವಬ್ಧಾರಿಗಳನ್ನು ನಿಭಾಯಿಸಿಕೊಂಡು ಬಂದಿರುವ ಅಕ್ಷಯ್‌ ರೈ ದಂಬೆಕಾನರವರಿಗೆ ಈ ಬಾರಿ ವಿಜಯೇಂದ್ರರವರ ಭಾರತೀಯ ಪಕ್ಷದ ತಂಡದಲ್ಲಿ ಉನ್ನತ ಸ್ಥಾನ ದೊರಕಿರುವುದು ಇವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ. ಅಕ್ಷಯ್‌ ರೈ ದಂಬೆಕಾನರವರು ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್‌ ಮೀಡಿಯಾ ಕೋ-ಕನ್ವಿನರ್ ಆಗಿ ಇಂದಿನಿಂದ ಕಾರ್ಯನಿರ್ವಹಿಸಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!