ಪುತ್ತೂರು ತಾಲೂಕು ಯುವ ಬಂಟರ ಸಂಘದ ಮುಂದಿನ ಎರಡು ವರ್ಷದ ಅವಧಿಗೆ ಡಾ. ಹರ್ಷಕುಮಾರ್ ರೈ ಮಾಡಾವು ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ ಮತ್ತು ಪ್ರಜ್ವಲ್ ರೈ ಸೊರಕೆ, ಕೋಶಾಧಿಕಾರಿಯಾಗಿ ಶಿವಶ್ರೀ ರಂಜನ್ ರೈ ದೇರ್ಲ ಆಯ್ಕೆಗೊಂಡಿದ್ದಾರೆ.
ಫೆ.15 ರಂದು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಂತೆ ಈ ಆಯ್ಕೆಯನ್ನು ಸಂಘದ ಸಲಹೆಗಾರ ಚುನಾವಣಾಧಿಕಾರಿ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಅವರ ನೇತೃತ್ವದಲ್ಲಿ ನೆರವೇರಿಸಲಾಯಿತು.
ಚುನಾವಣಾಧಿಕಾರಿಯವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ಹಸ್ತಾಂತರಿಸಿದರು. ಜೊತೆ ಕಾರ್ಯದರ್ಶಿಯಾಗಿ ಶುಭಾ ರೈ, ಸಂಘಟನಾ ಸಂಚಾಲಕರಾಗಿ ಸಂದೇಶ್ ರೈ ಡಿ, ಧಾರ್ಮಿಕ ಸಂಚಾಲಕರಾಗಿ ಮನ್ಮಥ ಶೆಟ್ಟಿ, ಉಪಾಧ್ಯಕ್ಷರುಗಳಾಗಿ ಪುತ್ತೂರು ನಗರ ವಲಯದ ನಿಹಾಲ್ ಪಿ ಶೆಟ್ಟಿ, ಉಪ್ಪಿನಂಗಡಿ ವಲಯದ ಸತೀಶ್ ಎನ್ ಶೆಟ್ಟಿ, ಪಾಣಾಜೆ ವಲಯದ ಜಿ.ಕೆ. ಕಾರ್ತಿಕ್ ರೈ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದಂತೆ ನೆಟ್ಟಣಿಗೆ ಮುಡ್ನೂರು, ಕಡಬ, ಬೆಳಂದೂರು, ನೆಲ್ಯಾಡಿ ವಲಯಕ್ಕೆ ಹಾಗೂ 9 ಮಂದಿ ಸಂಘಟನಾ ಕಾರ್ಯದರ್ಶಿಗಳು, 9 ಮಂದಿ ಸಹ ಕಾರ್ಯದರ್ಶಿಗಳು (ಮಹಿಳೆಯರಿಗೆ ಮಾತ್ರ), ಹಾಗೂ 9 ಮಂದಿ ಸಂಚಾಲಕರನ್ನು ಹೊಸ ಸಮಿತಿ ಸಭೆಯಲ್ಲಿ ವಲಯವಾರು ಪ್ರಾತಿನಿಧ್ಯದನ್ವಯ ನೇಮಕ ಮಾಡಬೇಕಾಗಿದ್ದು, ಅದನ್ನು ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷರು ಮುಂದಿನ ದಿನಗಳಲ್ಲಿ ಮಾಡಲಿದ್ದಾರೆ. ಫೆ. 14 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಫೆ.15 ರಂದು ಬೆಳಿಗ್ಗೆ ನಾಮಪತ್ರ ಪರಿಶೀಲನೆ ಬಳಿಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ.
ತಾಲೂಕು ಯುವ ಬಂಟರ ಸಂಘದ ನೂತನ ಅಧ್ಯಕ್ಷ ಪದಾಧಿಕಾರಿಗಳನ್ನು ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮಾನಾಥ ಶೆಟ್ಟಿ, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಸಹಿತ ಸಂಘದ ಹಿರಿಯರು ಹೂಗುಚ್ಛ ನೀಡುವ ಮೂಲಕ ಗೌರವಿಸಿದರು. ಈ ಸಂದರ್ಭ ಬಂಟರ ಮಾತೃ ಸಂಘದ ಸಹ ಸಂಚಾಲಕ ಜಯಪ್ರಕಾಶ್ ರೈ, ತಾಲೂಕು ಬಂಟರ ಸಂಘದ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ, ತಾಲೂಕು ಬಂಟರ ಸಂಘದ ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ, ಮಹಿಳಾ ಸಂಘದ ಮಾಜಿ ಕೋಶಾಧಿಕಾರಿ ವತ್ಸಲಾ ಪಿ ಶೆಟ್ಟಿ, ಗೌತಮ್ ರೈ ಸಾಂತ್ಯ, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಯುವ ಬಂಟರ ಸಂಘದ ರವಿಪ್ರಸಾದ್ ಶೆಟ್ಟಿ, ರವಿಚಂದ್ರ ರೈ ಕುಂಬ್ರ, ಭಾಸ್ಕರ್ ರೈ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…