ಇತರೆ

ಸದ್ಗುರು ಮಧುಸೂದನ್ ಸಾಯಿ ಅವರಿಂದ ವಿಟ್ಲ ಸಮೀಪ ಅಳಿಕೆಯಲ್ಲಿ ನಾರಾಯಣ ಭಟ್ ಸ್ಮಾರಕ ಸಂಪೂರ್ಣ; ಉಚಿತ ಸನಿವಾಸ; ಶಿಕ್ಷಣ ಸಂಸ್ಥೆಯ ಸ್ಥಾಪನೆ ಘೋಷಣೆ

ಸದ್ಗುರು ಶ್ರೀ ಮಧುಸೂದನ ಸಾಯಿ ಅವರಿಂದ ಅಳಿಕೆಯಲ್ಲಿ ಮಡಿಯಾಲ ನಾರಾಯಣ ಭಟ್ ಸ್ಮಾರಕ ಸಂಪೂರ್ಣ ಉಚಿತ ಸನಿವಾಸ ಉನ್ನತ ಶಿಕ್ಷಣ ಸಂಸ್ಥೆಯ ಸ್ಥಾಪನೆ ದಕ್ಷಿಣ ಕನ್ನಡ : ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ವಿಟ್ಲ ಸಮೀಪದ ಮೈತ್ರೇಯಿ ಗುರುಕುಲಕ್ಕೆ ಸದ್ಗುರು ಶ್ರೀ ಮಧುಸೂದನ ಸಾಯಿಯವರು ದಿನಾಂಕ 15.2024 ರಂದು ಆಗಮಿಸಿ, ಅಜೇಯ ಟ್ರಸ್ಟ್ ನಿಂದ ನಿರ್ಮಿಸಲ್ಪಟ್ಟ ನೂತನ ಭವ್ಯ ವಿದ್ಯಾರ್ಥಿನಿ ನಿಲಯವನ್ನು ಉದ್ಘಾಟಿಸಿದರು. ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ, ಸಂಸ್ಥೆಯು ಭಾರತೀಯ ಸಂಸ್ಕೃತಿಯ ಪುನರುತ್ಥಾನಕ್ಕಾಗಿ ವೇದಾಧಾರಿತ ಶಿಕ್ಷಣವನ್ನು, ದೇಶದ ಸ್ತ್ರೀ ಸಮುದಾಯಕ್ಕೆ ವಸತಿ- ಊಟೋಪಚಾರ ಸಹಿತ, ಸಂಪೂರ್ಣ ಉಚಿತವಾಗಿ ನೀಡುತ್ತಿರುವುದು ಅತ್ಯಂತ ಶ್ಲಾಘನೀಯವೆಂದು ಬಣ್ಣಿಸಿದರು.

ಇಂತಹ ವಿಶಿಷ್ಟ ವಿದ್ಯಾಸಂಸ್ಥೆಗಳ ಮೂಲಕ ದೇಶದಲ್ಲಿ ಸನಾತನ ಧರ್ಮದ ಪುನರುಜ್ಜೀವನಕ್ಕಾಗಿ ಸರ್ವರೂ ಒಗ್ಗೂಡಿ ಕಾರ್ಯವೆಸಗಬೇಕೆಂದು ಕರೆಯಿತ್ತರು.ಇದೇ ಸಂದರ್ಭದಲ್ಲಿ ಅಳಿಕೆ ಮತ್ತು ಮುದ್ದೇನಹಳ್ಳಿಯ ಸುಪ್ರಸಿದ್ಧ ಲೋಕ ಸೇವಾ ವಿದ್ಯಾಸಂಸ್ಥೆಗಳ ಸ್ಥಾಪಕರಾದ ದಿl ಮಡಿಯಾಲ ನಾರಾಯಣ ಭಟ್ಟರ ಹೆಸರಿನಲ್ಲಿ, ಅವರ ಜನ್ಮಸ್ಥಳವಾದ ಅಳಿಕೆ ಗ್ರಾಮದಲ್ಲಿ ಒಂದು ಸಂಪೂರ್ಣ ಉಚಿತ ಸನಿವಾಸ ಉನ್ನತ ಶಿಕ್ಷಣ ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಿಸಿದರು. ಇಂತಹ ವಿಶ್ವವಿದ್ಯಾನಿಲಯ ಕೇಂದ್ರವನ್ನು ಸ್ಥಾಪಿಸಿ ದೇಶದ ಯುವ ಜನಾಂಗವನ್ನು ನಿಸ್ವಾರ್ಥ, ತ್ಯಾಗಶೀಲ ದೇಶ ಸೇವಕರನ್ನಾಗಿ ರೂಪಿಸಬೇಕೆಂಬುದು ನಾರಾಯಣ ಭಟ್ಟರ ಉಜ್ವಲ ಆಶಯವಾಗಿತ್ತು.

ಇದುವೇ ಅವರ ಸಹೋದರಿ ದಿl ದೇವಕಿ ಭಟ್ಟರ ಜೀವನದ ಅಂತಿಮ ಆಶಯವು ಆಗಿತ್ತು. ಇಂತಹ ಸಂಸ್ಥೆಯ ಸ್ಥಾಪನೆಗಾಗಿ, ದೇವಕಿ ಭಟ್ ಅವರು ದಾನವಾಗಿ ನೀಡಿರುವ ಅಳಿಕೆಯ ಅವರ ಸ್ವಂತ ಜಮೀನಿನಲ್ಲಿ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಒಂದು ಉನ್ನತ ಶಿಕ್ಷಣ ಕೇಂದ್ರವನ್ನು ಪ್ರಾರಂಭಿಸುವ ತಮ್ಮ ಸಂಕಲ್ಪವನ್ನು ಶ್ರೀ ಮಧುಸೂದನ ಸಾಯಿ ಅವರು ಪ್ರಕಟಿಸಿದ್ದಾರೆ. ನಾರಾಯಣ ಭಟ್ಟರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ, ನವೆಂಬರ್ 2026ರಲ್ಲಿ ಈ ಉನ್ನತ ಶಿಕ್ಷಣ ಸಂಸ್ಥೆಯು ಕಾರ್ಯೋನ್ಮುಖವಾಗಲಿದೆ. ಅದಕ್ಕೆ ಮೊದಲೇ ಸಂಸ್ಥೆಗೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು.ಈ ಮಹತ್ತರ ಘೋಷಣೆಯ ಸಂದರ್ಭದಲ್ಲಿ ಮಡಿಯಾಲ ನಾರಾಯಣ ಭಟ್ಟರ ನಿಕಟವರ್ತಿಗಳಾಗಿದ್ದ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳು ಮತ್ತು ಪ್ರಶಾಂತಿ ಬಾಲಮಂದಿರ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಬಿ. ಎನ್. ನರಸಿಂಹಮೂರ್ತಿ, ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ನ ಧರ್ಮದರ್ಶಿಗಳಾದ ಶ್ರೀ ಸಂಜೀವ ಶೆಟ್ಟಿ ಹಾಗೂ ಶ್ರೀ ಮಹೇಂದ್ರ ಹೆಗ್ಗಡೆ ಯವರು ಉಪಸ್ಥಿತರಿದ್ದರು. ಇವರಲ್ಲದೇ ಕೋಟೆಮನೆ ಶ್ರೀ ರಾಮಚಂದ್ರ ಭಟ್ಟರು, ಶ್ರೀ ಸೀತಾರಾಮ ಕೆದಿಲಾಯ, ಕಜಂಪಾಡಿ ಶ್ರೀ ಸುಬ್ರಮಣ್ಯ ಭಟ್ಟರು ಹಾಗೂ ಕಲ್ಲಡ್ಕ ಶ್ರೀ ಪ್ರಭಾಕರ ಭಟ್ಟರು ಈ ಸಭೆಯಲ್ಲಿ ಆಸೀನರಾಗಿದ್ದರು.ಕರ್ನಾಟಕ ರಾಜ್ಯದಲ್ಲಿ ಹತ್ತಾರು ಆದರ್ಶ ವಿದ್ಯಾ ನಿವೇಶನಗಳನ್ನು ಸ್ಥಾಪಿಸಬೇಕೆಂಬುದು ಮಡಿಯಾಲ ನಾರಾಯಣ ಭಟ್ಟರ ಕನಸಾಗಿತ್ತು. ಸದ್ಗುರು ಶ್ರೀ ಮಧುಸೂದನ ಸಾಯಿಯವರು ಭಗವಾನ್ ಸತ್ಯಸಾಯಿ ಬಾಬಾರವರ ಸ್ಪೂರ್ತಿ-ಪ್ರೇರಣೆ-ಅನುಗ್ರಹಗಳಿಂದ ಕಳೆದ ಹತ್ತು ವರ್ಷಗಳಲ್ಲಿ ಅವರ ಎಲ್ಲಾ ಕನಸುಗಳನ್ನು ನನಸು ಮಾಡಿದ್ದಾರೆ.

ಅವರು ಕರ್ನಾಟಕದ 19 ಜಿಲ್ಲೆಗಳಲ್ಲಿ ಅಲ್ಲದೆ ತೆಲಂಗಾಣ ಹಾಗೂ ತಮಿಳುನಾಡಿನಲ್ಲಿಯೂ ಒಂದೊಂದು ಆದರ್ಶ ವಿದ್ಯಾನಿವೇಶನಗಳನ್ನು ಈಗಾಗಲೇ ಸ್ಥಾಪಿಸಿದ್ದಾರೆ. ಇನ್ನೂ ವಿಶೇಷವೆಂದರೆ ಈ ವಿದ್ಯಾ ನಿವೇಶನಗಳಲ್ಲಿ ಎಲ್ಲಾ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೂ ವಸತಿ, ಊಟೋಪಚಾರ, ವಸ್ತ್ರ ಸಹಿತ ಶಿಕ್ಷಣವನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿರುವುದು. ಇನ್ನೂ ಮುಂದುವರಿದು, ಭಾರತ ದೇಶದಲ್ಲಿ ಸಂಪೂರ್ಣ ಉಚಿತ ಸೇವೆಯನ್ನು ನೀಡುತ್ತಿರುವ ಹನ್ನೆರಡು ಉನ್ನತ ಆಸ್ಪತ್ರೆಗಳನ್ನು ಹಾಗೂ ಫಿಜಿ, ಶ್ರೀಲಂಕಾ ಮತ್ತು ನೈಜೀರಿಯಾ ದೇಶಗಳಲ್ಲಿ ಒಂದೊಂದು ಆಸ್ಪತ್ರೆಯನ್ನು ಪ್ರಾರಂಭಿಸಿದ್ದಾರೆ. ಭಾರತದ 17 ಪ್ರಾಂತ್ಯಗಳಲ್ಲಿ ಹಾಗೂ ಕೆಲವು ಹೊರಗಿನ ದೇಶಗಳಲ್ಲಿ ಸೇರಿ ಒಟ್ಟು 30 ದಶಲಕ್ಷ ಮಕ್ಕಳಿಗೆ ಪ್ರತಿದಿನ ಪೌಷ್ಟಿಕತೆಯನ್ನು ವೃದ್ಧಿಗೊಳಿಸುವ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ. ಐದು ವರ್ಷಗಳ ಹಿಂದೆ ತಾವು ಸ್ಥಾಪಿಸಿದ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಇದೇ ವರ್ಷ ದೇಶದ ಮೊಟ್ಟ ಮೊದಲ ಸಂಪೂರ್ಣ ಉಚಿತ ವೈದ್ಯಕೀಯ ಶಿಕ್ಷಣ ಸಂಸ್ಥೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಪ್ರಾರಂಭಿಸಿದ್ದಾರೆ. ಈ ಮೆಡಿಕಲ್ ಕಾಲೇಜನ್ನು ಉದ್ಘಾಟಿಸಲು ದೇಶದ ಘನವೆತ್ತ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮುದ್ದೇನಹಳ್ಳಿಗೆ 2023ರ ಮಾರ್ಚ್ 25ರಂದು ಆಗಮಿಸಿದುದು ಒಂದು ವಿಶೇಷ.ಅಳಿಕೆ ಗ್ರಾಮದಲ್ಲಿ ಈ ಮೊದಲೇ ಶ್ರೀ ಮಧುಸೂದನ ಸಾಯಿಯವರು ಲೋಕಸೇವಾ ವಿದ್ಯಾಸಂಸ್ಥೆಗಳ ಸುವರ್ಣ ಮಹೋತ್ಸವ ಸಂದರ್ಭದಲ್ಲಿ 45,000 ಚದರ ಅಡಿಗಳ ಒಂದು ಭವ್ಯ ಪದವಿಪೂರ್ವ ಕಾಲೇಜು ಕಟ್ಟಡವನ್ನು ನಿರ್ಮಿಸಿರುತ್ತಾರೆ. ಅಲ್ಲದೆ ನಾರಾಯಣ ಭಟ್ಟರು ಜನಿಸಿದ ಮಡಿಯಾಲದ ಮೂಲ ಗೃಹವನ್ನು ನವೀಕರಿಸಿರುತ್ತಾರೆ. ಇದೀಗ ಅವರು ಇಂದು ಘೋಷಿಸಿರುವ ನಾರಾಯಣ ಭಟ್ಟರ ಹೆಸರಿನಲ್ಲಿನ ಸಂಪೂರ್ಣ ಉಚಿತ ಉನ್ನತ ಶಿಕ್ಷಣ ಸಂಸ್ಥೆಯು ಈ ಪ್ರದೇಶದಲ್ಲಿ ಒಂದು ಹೊಸ ಅಧ್ಯಾಯವನ್ನು ತೆರೆಯಲೆಂಬುದು ಸಾರ್ವಜನಿಕರ ಆಶಯವಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

3 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

3 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

4 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

4 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

4 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

4 days ago